ರಾಜ್ಯ

ಎಚ್ ಡಿ ಕೆ ಮನೆ ದೀಪಾಲಂಕಾರಕ್ಕೆ ಅನಧಿಕೃತ ವಿದ್ಯುತ್ ಬಳಕೆ : ಗೃಹಜೋತಿಗೆ ಅರ್ಜಿ ಹಾಕಬಹುದಿತ್ತಲ್ಲ ಎಂದ ಕಾಂಗ್ರೆಸ್

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಎಚ್ ಡಿಕೆ ನಿವಾಸಕ್ಕೆ ವಿದ್ಯುತ್ ದೀಪಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಜೆಪಿ ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರ ಮಾಡಲು ಅಧಿಕೃತವಾಗಿ ಬೀದಿ ಬದಿಯ ಕಂಬಗಳಿಂದ ನೇರವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನು ಈ ಕುರಿತು ಕಾಂಗ್ರೆಸ್ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಜಗತ್ತಿನ ಏಕೈಕ ಮಹಾ ಪ್ರಾಮಾಣಿಕ ಎಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರದ ನಿವಾಸದ ದೀಪಾವಳಿ ಅಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವಷ್ಟು ದಾರಿದ್ರ್ಯ ಬಂದಿರುವುದು ದುರಂತ.

ಎಚ್. ಡಿ ಕುಮಾರಸ್ವಾಮಿ ಅವರೇ ಗೃಹಜೋತಿ2 00 ಯೂನಿಟ್ ಉಚಿತ ಕೊಡುತ್ತಿದೆ ಹೊರತು 2000 ಯೂನಿಟ್ ಅಲ್ಲ! ನಿಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹ ಜ್ಯೋತಿಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದು ವ್ಯಂಗ್ಯವಾಡಿದೆ.

ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಎಚ್. ಡಿಕೆ ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದ ಮನೆಯಲ್ಲಿದ್ದೆ. ನೆನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ತಿಳಿಯಿತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವದ ಸ್ಥಿತಿ ಇದರಲ್ಲಿ ಮುಚ್ಚು ಮರೆ ಮಾಡುವಂತದ್ದು ಏನು ಇಲ್ಲ.

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಅಧಿಕಾರಿಗಳು ಬಂದು ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ. ಕಾಂಗ್ರೆಸ್ ಇದನ್ನೇ ದೊಡ್ಡದು ಮಾಡಿ ಪ್ರಚಾರಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲಕ ಮನಸ್ಥಿತಿಯ ಬಗ್ಗೆ ನನಗೆ ಮರುಕವಿದೆ ಎಂದಿದ್ದಾರೆ.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago