ರಾಜ್ಯ

ಎಚ್ ಡಿ ಕೆ ಮನೆ ದೀಪಾಲಂಕಾರಕ್ಕೆ ಅನಧಿಕೃತ ವಿದ್ಯುತ್ ಬಳಕೆ : ಗೃಹಜೋತಿಗೆ ಅರ್ಜಿ ಹಾಕಬಹುದಿತ್ತಲ್ಲ ಎಂದ ಕಾಂಗ್ರೆಸ್

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಎಚ್ ಡಿಕೆ ನಿವಾಸಕ್ಕೆ ವಿದ್ಯುತ್ ದೀಪಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಜೆಪಿ ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರ ಮಾಡಲು ಅಧಿಕೃತವಾಗಿ ಬೀದಿ ಬದಿಯ ಕಂಬಗಳಿಂದ ನೇರವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನು ಈ ಕುರಿತು ಕಾಂಗ್ರೆಸ್ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಜಗತ್ತಿನ ಏಕೈಕ ಮಹಾ ಪ್ರಾಮಾಣಿಕ ಎಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರದ ನಿವಾಸದ ದೀಪಾವಳಿ ಅಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವಷ್ಟು ದಾರಿದ್ರ್ಯ ಬಂದಿರುವುದು ದುರಂತ.

ಎಚ್. ಡಿ ಕುಮಾರಸ್ವಾಮಿ ಅವರೇ ಗೃಹಜೋತಿ2 00 ಯೂನಿಟ್ ಉಚಿತ ಕೊಡುತ್ತಿದೆ ಹೊರತು 2000 ಯೂನಿಟ್ ಅಲ್ಲ! ನಿಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹ ಜ್ಯೋತಿಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದು ವ್ಯಂಗ್ಯವಾಡಿದೆ.

ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಎಚ್. ಡಿಕೆ ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದ ಮನೆಯಲ್ಲಿದ್ದೆ. ನೆನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ತಿಳಿಯಿತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವದ ಸ್ಥಿತಿ ಇದರಲ್ಲಿ ಮುಚ್ಚು ಮರೆ ಮಾಡುವಂತದ್ದು ಏನು ಇಲ್ಲ.

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಅಧಿಕಾರಿಗಳು ಬಂದು ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ. ಕಾಂಗ್ರೆಸ್ ಇದನ್ನೇ ದೊಡ್ಡದು ಮಾಡಿ ಪ್ರಚಾರಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲಕ ಮನಸ್ಥಿತಿಯ ಬಗ್ಗೆ ನನಗೆ ಮರುಕವಿದೆ ಎಂದಿದ್ದಾರೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago