Mysore
24
overcast clouds

Social Media

ಸೋಮವಾರ, 30 ಮಾರ್ಚ್ 2026
Light
Dark

“ಏಕರೂಪ ನಾಗರಿಕ ಸಂಹಿತೆ” ಜಾರಿಯ ಅಗತ್ಯವಿದೆ: ಹೈಕೋರ್ಟ್‌

ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದೆ.

ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರಷ್ಟೇ ಸಮಾನ ಪಾಲು ಇಲ್ಲ. ಹೀಗಾಗಿ ಯುಸಿಸಿ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿರುವ ನ್ಯಾಯಪೀಠ ಸಂವಿಧಾನ ಕರಡು ರಚನಾ ಸಮಿತಿ ಸಭೆಯ ಚರ್ಚೆಯನ್ನು ಉಲ್ಲೇಖಿಸಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್, ಸರ್ದಾರ್‌ ವಲ್ಲಭಬಾಯ್‌ ಪಟೇಲ್‌, ಬಾಬು ರಾಜೇಂದ್ರ ಪ್ರಸಾದ್‌ ಅಂತಹವರೆಲ್ಲಾ ಯುಸಿಸಿ ಬೆಂಬಲಿಸಿದ್ದರು ಎಂದು ಹೇಳಿದೆ.

ಸಂವಿಧಾನದ ಮೂಲಭೂತ ಅಂಶಗಳಾದ ಪ್ರಜಾಪ್ರಭುತ್ವ, ಏಕತೆ, ಸರ್ವರಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಕಾರ್ಯಗತಗೊಳಿಸಲು ಸಂವಿಧಾನದ ಕಲಂ 44ನೇ ವಿಧಿಯ ಆಶಯದಂತೆ ಯುಸಿಸಿ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.

Tags:
error: Content is protected !!