ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದೆ.
ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರಷ್ಟೇ ಸಮಾನ ಪಾಲು ಇಲ್ಲ. ಹೀಗಾಗಿ ಯುಸಿಸಿ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿರುವ ನ್ಯಾಯಪೀಠ ಸಂವಿಧಾನ ಕರಡು ರಚನಾ ಸಮಿತಿ ಸಭೆಯ ಚರ್ಚೆಯನ್ನು ಉಲ್ಲೇಖಿಸಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಬಾಯ್ ಪಟೇಲ್, ಬಾಬು ರಾಜೇಂದ್ರ ಪ್ರಸಾದ್ ಅಂತಹವರೆಲ್ಲಾ ಯುಸಿಸಿ ಬೆಂಬಲಿಸಿದ್ದರು ಎಂದು ಹೇಳಿದೆ.
ಸಂವಿಧಾನದ ಮೂಲಭೂತ ಅಂಶಗಳಾದ ಪ್ರಜಾಪ್ರಭುತ್ವ, ಏಕತೆ, ಸರ್ವರಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಕಾರ್ಯಗತಗೊಳಿಸಲು ಸಂವಿಧಾನದ ಕಲಂ 44ನೇ ವಿಧಿಯ ಆಶಯದಂತೆ ಯುಸಿಸಿ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…