ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದೆ.
ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರಷ್ಟೇ ಸಮಾನ ಪಾಲು ಇಲ್ಲ. ಹೀಗಾಗಿ ಯುಸಿಸಿ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿರುವ ನ್ಯಾಯಪೀಠ ಸಂವಿಧಾನ ಕರಡು ರಚನಾ ಸಮಿತಿ ಸಭೆಯ ಚರ್ಚೆಯನ್ನು ಉಲ್ಲೇಖಿಸಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಬಾಯ್ ಪಟೇಲ್, ಬಾಬು ರಾಜೇಂದ್ರ ಪ್ರಸಾದ್ ಅಂತಹವರೆಲ್ಲಾ ಯುಸಿಸಿ ಬೆಂಬಲಿಸಿದ್ದರು ಎಂದು ಹೇಳಿದೆ.
ಸಂವಿಧಾನದ ಮೂಲಭೂತ ಅಂಶಗಳಾದ ಪ್ರಜಾಪ್ರಭುತ್ವ, ಏಕತೆ, ಸರ್ವರಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಕಾರ್ಯಗತಗೊಳಿಸಲು ಸಂವಿಧಾನದ ಕಲಂ 44ನೇ ವಿಧಿಯ ಆಶಯದಂತೆ ಯುಸಿಸಿ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…