ರಾಜ್ಯ

“ಏಕರೂಪ ನಾಗರಿಕ ಸಂಹಿತೆ” ಜಾರಿಯ ಅಗತ್ಯವಿದೆ: ಹೈಕೋರ್ಟ್‌

ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದೆ.

ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರಷ್ಟೇ ಸಮಾನ ಪಾಲು ಇಲ್ಲ. ಹೀಗಾಗಿ ಯುಸಿಸಿ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿರುವ ನ್ಯಾಯಪೀಠ ಸಂವಿಧಾನ ಕರಡು ರಚನಾ ಸಮಿತಿ ಸಭೆಯ ಚರ್ಚೆಯನ್ನು ಉಲ್ಲೇಖಿಸಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್, ಸರ್ದಾರ್‌ ವಲ್ಲಭಬಾಯ್‌ ಪಟೇಲ್‌, ಬಾಬು ರಾಜೇಂದ್ರ ಪ್ರಸಾದ್‌ ಅಂತಹವರೆಲ್ಲಾ ಯುಸಿಸಿ ಬೆಂಬಲಿಸಿದ್ದರು ಎಂದು ಹೇಳಿದೆ.

ಸಂವಿಧಾನದ ಮೂಲಭೂತ ಅಂಶಗಳಾದ ಪ್ರಜಾಪ್ರಭುತ್ವ, ಏಕತೆ, ಸರ್ವರಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಕಾರ್ಯಗತಗೊಳಿಸಲು ಸಂವಿಧಾನದ ಕಲಂ 44ನೇ ವಿಧಿಯ ಆಶಯದಂತೆ ಯುಸಿಸಿ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

6 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

9 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

10 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

11 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

12 hours ago