ರಾಜ್ಯ

ಕೇಂದ್ರ ಬಜೆಟ್ 2025| ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ ಮಂಡನೆ ಮಾಡಿರುವುದು ಕೇಂದ್ರ ಬಜೆಟ್‌ ಅಲ್ಲ. ಬಿಹಾರದ ಬಜೆಟ್‌, ಈ ಬಿಹಾರಿ ಬಜೆಟ್‌ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಕೇಂದ್ರ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವೇನೂ ಮೊಸರಲ್ಲಿ ಕಲ್ಲು ಹುಡುಕುತ್ತಿಲ್ಲ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರೇ ರಾಜ್ಯಕ್ಕೆ ಸಮರ್ಪಕ ತೆರಿಗೆ ಪರಿಹಾರ ನೀಡಿಲ್ಲ. ಅಲ್ಲದೇ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿ ತೆರಿಗೆ ಪರಿಹಾರ ಕೇಳಬೇಕು ಎಂದಿದ್ದರು. ಹೀಗಾಗಿ ತೆರಿಗೆ ಅಂಕಿ ಅಂಶವನ್ನಿಟ್ಟುಕೊಂಡು ನಾವು ಕೇಂದ್ರದಿಂದ ತೆರಿಗೆ ಪರಿಹಾರ, ಅನುದಾನ ಕೇಳುತ್ತಿದ್ದೇವೆ ಎಂದು ಹೇಳಿದರು.

ಉದ್ಯೋಗ ಸೃಷ್ಟಿಸುವ ರಾಜ್ಯಗಳಿಗೆ ಅಧಿಕ ಅನುದಾನ ನೀಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಆದರೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಬಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಲ್ಲದೇ ಕಳೆದ ಬಜೆಟ್‌ನಲ್ಲಿಯೂ ಆಂಧ್ರಪ್ರದೇಶದ ಅಮರಾವತಿಗೆ ಹೆಚ್ಚು ಒತ್ತು ನೀಡಿದ್ದರು. ಹಾಗಾಗಿ ಇದು ರಾಜಕೀಯ ಬಜೆಟ್‌ ಅಗಿದೆಯೇ ಹೊರತು, ದೇಶ ಕಟ್ಟುವ ಮತ್ತು ಉದ್ಯೋಗ ಸೃಷ್ಠಿಸುವ ಬಜೆಟ್‌ ಅಲ್ಲ ಎಂದು ಆರೋಪಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರೇ ಮುಂದಿನ ದಿನಗಳಲ್ಲಿಯೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಾರೆಂಬುದು ನಮ್ಮ ಭಾವನೆಯೆಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಇದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ. ಹೀಗಾಗಿ ಹೈಕಮಾಂಡ್‌ನ ತೀರ್ಮಾನವೇ ಅಂತಿಮವಾಗಿರಲಿದೆ. ಈ ಬಗ್ಗೆ ಮೊದಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಅದನ್ನೇ ಹೇಳಿದ್ದರು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

3 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

15 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

21 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

25 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

27 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

29 mins ago