ರಾಜ್ಯ

ಕೇಂದ್ರ ಬಜೆಟ್ 2025| ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ ಮಂಡನೆ ಮಾಡಿರುವುದು ಕೇಂದ್ರ ಬಜೆಟ್‌ ಅಲ್ಲ. ಬಿಹಾರದ ಬಜೆಟ್‌, ಈ ಬಿಹಾರಿ ಬಜೆಟ್‌ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಕೇಂದ್ರ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವೇನೂ ಮೊಸರಲ್ಲಿ ಕಲ್ಲು ಹುಡುಕುತ್ತಿಲ್ಲ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರೇ ರಾಜ್ಯಕ್ಕೆ ಸಮರ್ಪಕ ತೆರಿಗೆ ಪರಿಹಾರ ನೀಡಿಲ್ಲ. ಅಲ್ಲದೇ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿ ತೆರಿಗೆ ಪರಿಹಾರ ಕೇಳಬೇಕು ಎಂದಿದ್ದರು. ಹೀಗಾಗಿ ತೆರಿಗೆ ಅಂಕಿ ಅಂಶವನ್ನಿಟ್ಟುಕೊಂಡು ನಾವು ಕೇಂದ್ರದಿಂದ ತೆರಿಗೆ ಪರಿಹಾರ, ಅನುದಾನ ಕೇಳುತ್ತಿದ್ದೇವೆ ಎಂದು ಹೇಳಿದರು.

ಉದ್ಯೋಗ ಸೃಷ್ಟಿಸುವ ರಾಜ್ಯಗಳಿಗೆ ಅಧಿಕ ಅನುದಾನ ನೀಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಆದರೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಬಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಲ್ಲದೇ ಕಳೆದ ಬಜೆಟ್‌ನಲ್ಲಿಯೂ ಆಂಧ್ರಪ್ರದೇಶದ ಅಮರಾವತಿಗೆ ಹೆಚ್ಚು ಒತ್ತು ನೀಡಿದ್ದರು. ಹಾಗಾಗಿ ಇದು ರಾಜಕೀಯ ಬಜೆಟ್‌ ಅಗಿದೆಯೇ ಹೊರತು, ದೇಶ ಕಟ್ಟುವ ಮತ್ತು ಉದ್ಯೋಗ ಸೃಷ್ಠಿಸುವ ಬಜೆಟ್‌ ಅಲ್ಲ ಎಂದು ಆರೋಪಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರೇ ಮುಂದಿನ ದಿನಗಳಲ್ಲಿಯೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಾರೆಂಬುದು ನಮ್ಮ ಭಾವನೆಯೆಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಇದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ. ಹೀಗಾಗಿ ಹೈಕಮಾಂಡ್‌ನ ತೀರ್ಮಾನವೇ ಅಂತಿಮವಾಗಿರಲಿದೆ. ಈ ಬಗ್ಗೆ ಮೊದಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಅದನ್ನೇ ಹೇಳಿದ್ದರು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

6 mins ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

1 hour ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

2 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

3 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

4 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

5 hours ago