ರಾಜ್ಯ

ಜುಲೈ.23ರಂದು ಕೇಂದ್ರ ಬಜೆಟ್‌ ಮಂಡನೆ: ಶಿಕ್ಷಣ ಕ್ಷೇತ್ರದ ನಿರೀಕ್ಷೆಗಳೇನು ಗೊತ್ತಾ.?

ನವದೆಹಲಿ: ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜುಲೈ.23ರಂದು ಬಜೆಟ್‌ ಮಂಡಿಸಲು ಸಜ್ಜಾಗಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದು, ಈ ಬಜೆಟ್‌ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೀಡಿದ್ದ ಆಶ್ವಾಸನೆಗಳು ಹಾಗೂ ಪ್ರಣಾಳಿಕೆಗಳ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಇನ್ನು ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣ ವಲಯ ಕೂಡ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ದೊಡ್ಡ ದೊಡ್ಡ ಹೂಡಿಕೆಗಳು ಮತ್ತು ಶಿಕ್ಷಣ ವಲಯ ಸುಧಾರಣೆಗೆ ಕಾರಣವಾಗುವ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಸಾಮಾನ್ಯ ಜನರು ಹಾಗೂ ಮಹಿಳೆಯರು ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಮಹತ್ವ ಕೊಡಲಿದ್ದು, ಬಜೆಟ್‌ನಲ್ಲಿ ಯಾವ ಯಾವ ಕ್ಷೇತ್ರಕ್ಕೆ ಬಂಪರ್‌ ಆಫರ್‌ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

7 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

9 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

10 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

11 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

11 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

12 hours ago