ವಿಜಯನಗರ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು.
ದಕ್ಷಿಣ ಕಾಶಿ ಎಂದೂ ಕರೆಯಿಸಿಕೊಳ್ಳುವ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಹಂಪಿಯ ಆನೆ ಲಕ್ಷ್ಮೀಯಿಂದ ಆಶೀರ್ವಾದ ಪಡೆದುಕೊಂಡರು.
ಇದನ್ನು ಓದಿ : ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ವಿರೂಪಾಕ್ಷನ ದರ್ಶನ ಪಡೆದ ಬಳಿಕ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನನಗೆ ಬಹಳಷ್ಟು ಜನ ಹಂಪಿಯನ್ನು ನೋಡಿ ಎನ್ನುತ್ತಿದ್ದರು. ಇಂದು ನನಗೆ ಆ ಅವಕಾಶ ಸಿಕ್ಕಿದೆ. ಇದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆ ಕಣ್ತುಂಬಿಕೊಂಡಿದ್ದಕ್ಕೆ ಸಂತಸವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯುನೆಸ್ಕೋ ಗುರುತಿಸುವ ಐತಿಹಾಸಿಕ ತಾಣ ಹಂಪಿ. ಇಲ್ಲಿನ ಪ್ರತಿಯೊಂದು ಶಿಲೆಯೂ ಪರಂಪರೆ ಪ್ರತಿಬಿಂಬಿಸುತ್ತಿದೆ. ಇಲ್ಲಿ ಉತ್ಖನನ ಕಾರ್ಯ ನಡೆಯುತ್ತಿವೆ. ಹಂಪಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…