ರಾಜ್ಯ

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಟಾಂಗ್ ಕೊಟ್ಟಿರುವ ಅವರು, ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಸತ್ಯಮೇವ ಜಯತೇ.. ಎಂದು ಕುಟುಕಿದ್ದಾರೆ.

ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago