ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಸ್ಲಿಮರಿಗೆ ಕಾಂಗ್ರೆಸ್‌ ಸರ್ಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್‌ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್‌ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್‌ ಪಕ್ಷದ ಅಚಲ ನಿಲುವು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

59 seconds ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

1 hour ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

1 hour ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

2 hours ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

2 hours ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

2 hours ago