ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಸ್ಲಿಮರಿಗೆ ಕಾಂಗ್ರೆಸ್‌ ಸರ್ಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್‌ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್‌ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್‌ ಪಕ್ಷದ ಅಚಲ ನಿಲುವು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

5 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago