ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಸ್ಲಿಮರಿಗೆ ಕಾಂಗ್ರೆಸ್‌ ಸರ್ಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್‌ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್‌ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್‌ ಪಕ್ಷದ ಅಚಲ ನಿಲುವು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

6 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

7 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

8 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

9 hours ago