ರಾಜ್ಯ

ಶಾಸಕ ಗಣಿಗ ರವಿ ಮೇಲೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ

  • ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ!
  • ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ

ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು,  ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ಪ್ರಹಾರ ನಡೆಸಿದರು.

ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದರು ಸಚಿವರು.

ಬಳಿಕ ಸಚಿವರು ನಗರಸಭೆ ಸದಸ್ಯರಾದ ಮಹದೇವು, ರಾಮಲಿಂಗಯ್ಯ, ವಿಶಾಲಾಕ್ಷಿ ಅವರ ಮನೆಗಳಿಗೆ ಭೇಟಿ ನೀಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

6 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

7 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

7 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

8 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

8 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

8 hours ago