ರಾಜ್ಯ

ಶಾಸಕ ಗಣಿಗ ರವಿ ಮೇಲೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ

  • ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ!
  • ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ

ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು,  ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ಪ್ರಹಾರ ನಡೆಸಿದರು.

ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದರು ಸಚಿವರು.

ಬಳಿಕ ಸಚಿವರು ನಗರಸಭೆ ಸದಸ್ಯರಾದ ಮಹದೇವು, ರಾಮಲಿಂಗಯ್ಯ, ವಿಶಾಲಾಕ್ಷಿ ಅವರ ಮನೆಗಳಿಗೆ ಭೇಟಿ ನೀಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 mins ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

8 mins ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

10 mins ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

4 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

4 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

4 hours ago