ರಾಜ್ಯ

ಶಾಸಕ ಗಣಿಗ ರವಿ ಮೇಲೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ

  • ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ!
  • ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ

ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು,  ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ಪ್ರಹಾರ ನಡೆಸಿದರು.

ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದರು ಸಚಿವರು.

ಬಳಿಕ ಸಚಿವರು ನಗರಸಭೆ ಸದಸ್ಯರಾದ ಮಹದೇವು, ರಾಮಲಿಂಗಯ್ಯ, ವಿಶಾಲಾಕ್ಷಿ ಅವರ ಮನೆಗಳಿಗೆ ಭೇಟಿ ನೀಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago