ಕಾನೂನು ಹೋರಾಟ ಮಾಡುತ್ತೇವೆ ಎಂದು ಕಿಡಿ
ಶ್ರೀನಿವಾಸಪುರದ ಮಾಜಿ ಸ್ಪೀಕರ್ ಅರಣ್ಯ ಭೂಮಿ ಒತ್ತುವರಿ ಬಗ್ಗೆ ಕೇಂದ್ರ ಸಚಿವರ ಕಿಡಿ
ಬೆಂಗಳೂರು: ನಗರದ ಜಾಲಹಳ್ಳಿಯಲ್ಲಿ ಹೆಚ್ಎಂಟಿ ಕಂಪನಿಗೆ ಸೇರಿದ ಐದು ಎಕರೆ ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೆಚ್ಎಂಟಿ ಜಮೀನು ವಶ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯ ಸರ್ಕಾರಕ್ಕೆ ಹಿನ್ನೆಡೆ ಆಗುವುದು ಖಚಿತ ಎಂದರು.
ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು ಅದರ ಬಗ್ಗೆ ನೋಡಲಿ ಸಚಿವ ಈಶ್ವರ್ ಖಂಡ್ರೆ ಅವರು. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪು ಅನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಮೊದಲು ಇದನ್ನು ನೋಡಲಿ. ಎಷ್ಟು ಎಕರೆ ಲೂಟಿ ಆಗಿದೆ ಅಲ್ಲಿ ನೋಡಲಿ. ನಿನ್ನೆ ಐದು ಎಕರೆಗೆ ಬಲವಂತವಾಗಿ ಹೋಗಿ ಫೆನ್ಸಿಂಗ್ ಹಾಕಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಹೆಚ್ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ ಎಂದು ಅವರು ಹೇಳಿದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…