ರಾಜ್ಯ

ಸಿಎಂ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮೂಡ ನಿವೇಶನಗಳ ಚಕ್ರವ್ಯಹದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಮಾಡಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು; ಮೂಡದಿಂದ ಹಂಚಿಕೆ ಆಗಿದ್ದ ದಲಿತರೊಬ್ಬರ ನಿವೇಶನ ಕಬಳಿಸಿ ಮನೆ ಕಟ್ಟಿಸಿದ್ದಾರೆ. ಬಳಿಕ ಆ ಮನೆಯನ್ನು ಮಾರುವ ನಾಟಕ ಆಡಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತ ದಾಖಲೆಗಳು ನನ್ನ ಬಳಿ ಇವೆ ಎಂದು ಹೇಳಿದರು.

ಈ ರಾಜ್ಯಕ್ಕೆ ಉಪ ಮುಖ್ಯಮಂತ್ರಿ ಆಗಿದ್ದಾಗ ನೀವು ಯಾರ ಜಾಗವನ್ನು ಲಪಟಾಯಿಸಿ ಮನೆ ಕಟ್ಟಿದಿರಿ ಸ್ವಾಮಿ? ಅದರ ದಾಖಲೆ ಬೇಕಾ ನಿಮಗೆ? ದಲಿತರಿಗೆ ಮೂಡದಿಂದ ಹಂಚಿಕೆ ಆಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದವರು ಯಾರು ಎಂಬುದನ್ನು ಸ್ವಲ್ಪ ಹೇಳುತ್ತೀರಾ? 15 ನಿವೇಶನ ಬರೆಸಿಕೊಂಡಿರುವುದು ಅಷ್ಟೇ ಅಲ್ಲ, ಅದಕ್ಕೆ ಮೀರಿದ ಹಗರಣಗಳನ್ನು ಇವರು ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದರು.

ಸುಳ್ಳು ದಾಖಲೆ ಸೃಷ್ಟಿದ್ದ ಸಿದ್ದರಾಮಯ್ಯ
ದಲಿತ ವಿಶೇಷ ಚೇತನರೊಬ್ಬರ ಬಳಿ ₹24,000 ಕಟ್ಟಿಸಿಕೊಂಡು ಮೂಡದಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಆ ಜಾಗದ ಸುಳ್ಳು ದಾಖಲೆ ಸೃಷ್ಟಿ ಮಾಡಿಕೊಂಡು ಸಾಕಮ್ಮ ಎಂಬುವವರ ಹೆಸರಿನಲ್ಲಿ 10 ಸಾವಿರ ಚದರ ಅಡಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡವರು ಇವರು. ಆಮೇಲೆ ನಿವೇಶನದ ನಿಜ ಮಾಲೀಕರು ಬಂದು ನೋಡಿದರೆ ಅಲ್ಲಿ ಮನೆ ಕಟ್ಟಲಾಗಿತ್ತು. ಈ ಬಗ್ಗೆ ಜನ ಮರೆತಿರಬಹುದು, ಈ ಕುಮಾರಸ್ವಾಮಿ ಬಳಿ ಈಗಲೂ ದಾಖಲೆ ಇದೆ ಎಂದು ಕೇಂದ್ರ ಸಚಿವರು ಹೇಳಿದರು.

ನನ್ನ ಜೀವನ ತೆರದ ಪುಸ್ತಕ ಎಂದು ಯಾವಾಗಲೂ ಹೇಳುತ್ತಾರೆ ಅವರು. ಆ ತೆರೆದ ಪುಸ್ತಕವನ್ನು ಜನ ಒಮ್ಮೆ ತೆರೆದು ನೋಡಬೇಕು. ನಿವೇಶನ ಹೊಡೆದುಕೊಂಡರು, ಆಮೇಲೆ ಅಕ್ರಮವಾಗಿ ಮನೆ ಕಟ್ಟಿಕೊಂಡರು, ನಂತರ ಅದನ್ನು ಯಾರಿಗೆ ಮಾರಾಟ ಮಾಡಿದರು? ಇಷ್ಟಕ್ಕೂ ಯಾರಿಗೆ ಮಾಡಿದರು? ಈಗ ಯಾರ ಬಾಕಿ ಇದೆ ಅದು? ಸುಮ್ಮನೆ ಜನರ ಕಣ್ಣಿಗೆ ಮಂಕುಬೂದಿ ಎರಚಲು ಮಾರಾಟ ಎಂದು ತೋರಿಸಿಕೊಂಡಿದ್ದಾರೆ. ಎಲ್ಲವನ್ನೂ ತೆಗೆದು ನೋಡಿದರೆ ಅಸಲಿ ಬಣ್ಣ ಗೊತ್ತಾಗುತ್ತದೆ. ಆಗ ಇನ್ನೊಂದು ಹಗರಣ ಶುರುವಾಗುತ್ತದೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದರು.

ಸಾಲ ಮನ್ನಾ ಮಾಡಿದ್ದು ಯಾರು?
ರೈತರಿಗೆ ಕುಮಾರಸ್ವಾಮಿ ಏನು ಮಾಡಿದರು? ಎಂದು ಕೇಳಿದ್ದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು; ಅವರು ರೈತರ ಸಾಲಮನ್ನಾ ಮಾಡಿದ್ರಾ? ಈ ಕುಮಾರಸ್ವಾಮಿ ಮಾಡಿದ್ದು ಎಂದು ಸಿಎಂಗೆ ತೀವ್ರ ತರಾಟೆಗೆ ತೆಗೆದುಕೊಂಡರು.

ಪ್ರೋತ್ಸಾಹಧನ ನಾನೇ ಕೊಟ್ಟಿದ್ದು ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳೇ, ಈ ಪ್ರೋತ್ಸಾಹ ಧನ ಚಿಂತನೆ ಮಾಡಿದ್ದು ಯಡಿಯೂರಪ್ಪ ಅವರು. ಎರಡು ರೂಪಾಯಿ ಕೊಡುವ ವ್ಯವಸ್ಥೆ ತಂದಿದ್ದರು ಅವರು. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಪ್ರೋತ್ಸಾಹ ಧನ ₹6 ಮಾಡಬೇಕು ಎಂದು ತೀರ್ಮಾನ ತಗೊಂಡೆ. ಆಗ ನೀವೆಲ್ಲ ಸೇರಿ ಸರ್ಕಾರ ತೆಗೆದಿರಿ ಎಂದು ಅವರು ದೂರಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

4 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

24 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

46 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago