ರಾಜ್ಯ

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ vs ಐಪಿಎಸ್‌ ಅಧಿಕಾರಿ ಜಟಾಪಟಿ

ಬೆಂಗಳೂರು: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ಎಡಿಜಿಪಿ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಅನೇಕ ಆರೋಪ ಮಾಡಿದ್ದರು. ಆದರೆ, ಇದೀಗ ಎಡಿಜಿಪಿ ಎಂ.ಚಂದ್ರಶೇಖರ್‌ ಪತ್ರದ ಮೂಲಕ ಹಂದಿಗೆ ಹೋಲಿಸಿ ʼಹಂದಿಗಳೊಂದಿಗೆ ಕುಸ್ತಿ ಆಡುವುದಿಲ್ಲʼ ಎಂದು ಎಚ್‌ಡಿ ಕುಮಾರಸ್ವಾಮಿ ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ(ಸೆ.28) ದಂದು ಗಂಗೇನಹಳ್ಳಿ 1 ಎಕರೆ 11 ಗುಂಟೆ ಜಮೀನನ ಡಿನೋಟಿಫಿಕೇಷನ್‌ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ವಿಚಾರಣೆ ಮುಗಿಸಿಕೊಂಡು, ಬಳಿಕ ಪತ್ರಿಕಾಗೋಷ್ಠಿ ನಡೆಸಿ, ಎಡಿಜಿಪಿ ಚಂದ್ರಶೇಖರ್‌ ಅವರ ವಿರುದ್ಧ ಕಿಡಿಕಾರಿದರು.

ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿರುವುದ್ದೇನು?
ರಾಜ್ಯಪಾಲರ ಕಚೇರಿಯಲ್ಲಿ ಮಾಹಿತಿ ಸೋರಿಕೆಗೆ ಸಂಬಂಧಿಸಿದಂತೆ ಚಂದ್ರಶೇಖರ್‌ಗೆ ಎಷ್ಟು ಉದ್ಘಟತನ ಇರಬೇಕು? ಗವರ್ನರ್‌ ಕಚೇರಿ ಪರಿಶೀಲಿಸುತ್ತೇವೆ ಎಂದರೆ ಏನರ್ಥ? ನಿಮಗೆ ಸರ್ಕಾರ ಅನುಮತಿ ಕೊಟ್ಟಿತ್ತಾ? ಚಂದ್ರಶೇಖರ್‌ ಹಿನ್ನೆಲೆ ಗೊತ್ತಾ? ಆ ವ್ಯಕ್ತಿ ಹಿನ್ನೆಲೆ ಹುಡುಕಿ ಹೊರಟಾಗಲೇ ಗೊತ್ತಾಗಿದ್ದು, ಆ ವ್ಯಕ್ತಿ ಯುಪಿಎಸ್‌ಸಿಯಲ್ಲಿ ಆಯ್ಕೆಯಾಗಿ ಹಿಮಾಚಲದಲ್ಲಿ ಕೆಲಸ ಮಾಡಬೇಕಾದವನು ಎಂದು ಏಕವಚನದಲ್ಲಿಯೇ ಆರೋಪಿಸಿದ್ದಾರೆ.

ಎಡಿಜಿಪಿ ಚಂದ್ರಶೇಖರ್‌ ಹೇಳಿದ್ದೇನು?
ಈ ವಿಚಾರಗಳಿಗೆ ಉತ್ತರಿಸಿದ ಎಡಿಜಿಪಿ ಎಂ.ಚಂದ್ರಶೇಖರ್‌ ಅವರು, ಎಸ್‌ಐಟಿ ತನಿಖೆ ನಡೆಸುತ್ತಿರುವ ಅಪರಾಧ ಸಂಖ್ಯೆ 16/14ರ ಆರೋಪಿ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಸುಳ್ಳು, ಮಾನಹಾನಿಕಾರಕ, ಬೆದರಿಕೆ ಹಾಗೂ ದುರುದ್ದೋಶಪೂರಿತ ಆರೋಪಗಳನ್ನು ಮಾಡಿದ್ದಾರೆ. ರಾಜ್ಯಪಾಲರ ಹತ್ತಿರ ಈ ಆರೋಪಿಯೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ ವಿಚಾರ ಎಲ್ಲರಿಗೂ ತಿಳಿದೆ ಇದೆ. ಪ್ರಸ್ತುತ ಜಾಮೀನಿನ ಮೇಲೆ ಹೊರಗಿರುವ ಈ ಆರೋಪಿ ನಮ್ಮ ಕರ್ತವ್ಯ ನಿಭಾಯಿಸದೇ ಇರುವಂತೆ ಮಾಡಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಆರೋಪಿಸುವ ಮೂಲಕ ಎಸ್‌ಐಟಿ ಅಧಿಕಾರಿಗಳಲ್ಲಿ ಭಯ ಸೃಷ್ಠಿಸುವುದು ಹಾಗೂ ಮನೋಬಲ ಕುಸಿಯುವಂತೆ ಮಾಡುವುದೇ ಇದರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಹಂದಿಗಳೊಂದಿಗೆ ಕುಸ್ತಿ ಆಡುವುದಿಲ್ಲ ಎಂದ ಎಡಿಜಿಪಿ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿದ ಎಡಿಜಿಪಿ ಚಂದ್ರಶೇಖರ್‌, ಖ್ಯಾತ ಚಿಂತಕ ಜಾರ್ಜ್‌ ಬರ್ನಾರ್ಡ್‌ ಷಾ ಅವರ ಹೇಳಿಕೆಯ ಮೂಲಕ ಉತ್ತರಿಸಿದ್ದಾರೆ. ಏನೆಂದರೆ ʼಹಂದಿಗಳ ಜೊತೆ ಎಂದಿಗೂ ಕುಸ್ತಿಯಾಡಬೇಡ. ಹಂದಿ ಮತ್ತು ನೀವು ಇಬ್ಬರೂ ಕೊಳಕಾಗುತ್ತಿರಾ. ಆದರೆ ಹಂದಿಯೂ ಕೊಳಕಾಗುವುದನ್ನೇ ಇಷ್ಟಪಡುತ್ತದೆ ಎಂದಿದ್ದಾರೆ ಎಂಬ ಹೇಳಿಕೆಯನ್ನು ನೀಡಿ ತಿರುಗೇಟು ನೀಡಿದ್ದಾರೆ.

ಒಬ್ಬ ಆರೋಪಿ ಎಷ್ಟೇ ಉನ್ನತ , ದೊಡ್ಡ ವ್ಯಕ್ತಿ ಮತ್ತು ಎಷ್ಟೇ ಶೌರ್ಯವಂತರಾಗಿದ್ದರೂ ಅವರು ಆರೋಪಿಯೇ. ಆರೋಪಿಗಳಿಂದ ಈ ರೀತಿಯಾದ ಆರೋಪಗಳು ಹಾಗೂ ಬೆದರಿಕೆಗಳು ಬಂದರೆ ನಾವು ನಮ್ಮ ಮನೋಬಲವನ್ನು ಕುಸಿಯದಂತೆ ನೋಡಿಕೊಳ್ಳಬೇಕು. ನಾನು ಎಸ್‌ಐಟಿ ಮುಖ್ಯಸ್ಥನಾಗಿ ಹೇಳುತ್ತಿದ್ದೇನೆ, ಭಯ ಅಥವಾ ರಾಗಾದ್ವೇಷಗಳಿಲ್ಲದೆ ಈ ಪ್ರಕರಣದಲ್ಲಿರುವ ಆರೋಪಿಗೆ ಶಿಕ್ಷೆ ಕೊಡಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವ ವೇಳೆ ಅಪರಾಧಿಗಳು ಹಾಗೂ ಆರೋಪಿಗಳನ್ನು ಎದುರಿಸುವುದನ್ನು ನಾವು ತಪ್ಪಿಸಲು ಸಾಧ್ಯವಿಲ್ಲ. ಆದರೆ ಯಾವ ಕ್ರಿಮಿನಲ್‌, ಯಾವ ಆರೋಪಿಗಳ ಜೊತೆ ವಿರೋಧ ಕಟ್ಟಿಕೊಳ್ಳುತ್ತಾರೋ ಅವರೇ ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ಹೀಗಾಗಿ ನಾವು ನಮ್ಮ ಕರ್ತವ್ಯದಿಂದ ಹಿಂದೆ ಸರಿಯದೇ, ಭರವಸೆಯನ್ನು ಕಳೆದುಕೊಳ್ಳದೇ ಸತ್ಯಕ್ಕಾಗಿ ಹೋರಾಡಬೇಕು. ಸತ್ಯ, ದೇವರು ಹಾಗೂ ಕಾನೂನಿನ ಮೇಲೆ ನಂಬಿಕೆ ಇರಬೇಕು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿ ಇನ್ನಿತರ ಸಿಬ್ಬಂದಿಗಳಿಗೆ ಧೈರ್ಯ ತುಂಬಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

7 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

19 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

21 hours ago