ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಸರ್ಕಾರದ ಪ್ರತೀ ಹಂತದಲ್ಲೂ ಕಮಿಷನ್ ಹಾವಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಈ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಷನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ಹೆಚ್.ಕೆ. ಪಾಟೀಲ್ ಏನು ಮಾಡುತ್ತಿದ್ದರು;
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…