ರಾಜ್ಯ

ಕಾಂಗ್ರೆಸ್‌ ಕಮಿಷನ್‌ ದಂಧೆ 224 ಶಾಸಕರಿಗೂ ಗೊತ್ತಿದೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಸರ್ಕಾರದ ಪ್ರತೀ ಹಂತದಲ್ಲೂ ಕಮಿಷನ್‌ ಹಾವಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಷನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಹೆಚ್.ಕೆ‌. ಪಾಟೀಲ್ ಏನು ಮಾಡುತ್ತಿದ್ದರು;
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ‌. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

5 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

6 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

6 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

6 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

6 hours ago