ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಸರ್ಕಾರದ ಪ್ರತೀ ಹಂತದಲ್ಲೂ ಕಮಿಷನ್ ಹಾವಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಈ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಷನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ಹೆಚ್.ಕೆ. ಪಾಟೀಲ್ ಏನು ಮಾಡುತ್ತಿದ್ದರು;
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…