ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಸರ್ಕಾರದ ಪ್ರತೀ ಹಂತದಲ್ಲೂ ಕಮಿಷನ್ ಹಾವಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಈ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಷನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ಹೆಚ್.ಕೆ. ಪಾಟೀಲ್ ಏನು ಮಾಡುತ್ತಿದ್ದರು;
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…