ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನೆಲೆ ಭೀಮಾ ಹೆಜ್ಜೆ ಶತಮಾನದ ಸಂಭ್ರಮ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದ್ದಾರೆ.
ಡಾ. ಬಿ. ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ‘ಬೆಂಗಳೂರಿನಿಂದ ನಿಪ್ಪಾಣಿ’ವರೆಗೆ ಏಪ್ರಿಲ್ 11 ರಿಂದ 14ರವರೆಗೆ ಹಮ್ಮಿಕೊಂಡಿರುವ ‘ಭೀಮ ಹೆಜ್ಜೆ 100 ರ ಸಂಭ್ರಮ’ ಜನ ಜಾಗೃತಿ ಕಾರ್ಯಕ್ರಮದ ಉದ್ಘಾಟನೆಯನ್ನು ಇಂದು(ಏಪ್ರಿಲ್.11)ವಿಧಾನಸೌಧದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್ 10, 11 ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಭೇಟಿ ನೀಡಿದ್ದರು. ಬಹಿಷ್ಕೃತ ಹಿತಕಾರಿಣಿ ಸಭಾದ ಎರಡು ದಿನ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ವಸತಿ ಶಾಲೆಯ ಅಗತ್ಯದ ಬಗ್ಗೆ ಮಾತನಾಡಿದ್ದರು. ಆ ಐತಿಹಾಸಿಕ ಭೀಮಹೆಜ್ಜೆಗೆ ಶತಮಾನದ ಸಂಭ್ರಮ. ಈ ಭೀಮ ಹೆಜ್ಜೆ ಸಂಭ್ರಮ ಸತತ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯಲಿದ್ದು 15ನೇ ತಾರೀಕಿಗೆ ನಿಪ್ಪಾಣಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಏಪ್ರಿಲ್ 11 ರಿಂದ 15 ವರೆಗೆ ಬೆಂಗಳೂರಿನಿಂದ ನಿಪ್ಪಾಣಿಯವರೆಗೆ ಬೈಕ್ ಜಾಥಾವನ್ನು ಈ ಶತಮಾನ ಸಮಾರಂಭದ ನಿಮಿತ್ತ ಹಮ್ಮಿ ಕೊಳ್ಳಲಾಗಿದೆ ಎಂದು ಹೇಳಿದರು.
ಇನ್ನೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದರೂ ಭೀಮಹೆಜ್ಜೆ ಶತಮಾನದ ಸಂಭ್ರಮ ಮಾಡದೇ ಅಗೌರವ ತೋರಿದೆ. ಮೊನ್ನೆ ಮೊನ್ನೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ನಡೆಸಿಕೊಂಡ ರೀತಿ ಅಪಮಾನ ತೋರಿದೆ. ಇದು ಕಾಂಗ್ರೆಸ್ ಈಗಲೂ ಪಾಲಿಸುತ್ತಿರುವ ಪದ್ದತಿಯಾಗಿದೆ ಎಂದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…