ರಾಜ್ಯ

ಬೆಂಗಳೂರು| ಭೀಮಾ ಹೆಜ್ಜೆ ಶತಮಾನದ ಸಂಭ್ರಮಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನೆಲೆ ಭೀಮಾ ಹೆಜ್ಜೆ ಶತಮಾನದ ಸಂಭ್ರಮ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಚಾಲನೆ ನೀಡಿದ್ದಾರೆ.

ಡಾ. ಬಿ. ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ‘ಬೆಂಗಳೂರಿನಿಂದ ನಿಪ್ಪಾಣಿ’ವರೆಗೆ ಏಪ್ರಿಲ್ 11 ರಿಂದ 14ರವರೆಗೆ ಹಮ್ಮಿಕೊಂಡಿರುವ ‘ಭೀಮ ಹೆಜ್ಜೆ 100 ರ ಸಂಭ್ರಮ’ ಜನ ಜಾಗೃತಿ ಕಾರ್ಯಕ್ರಮದ ಉದ್ಘಾಟನೆಯನ್ನು ಇಂದು(ಏಪ್ರಿಲ್‌.11)ವಿಧಾನಸೌಧದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ ಅವರು, ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್ 10, 11 ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಭೇಟಿ ನೀಡಿದ್ದರು. ಬಹಿಷ್ಕೃತ ಹಿತಕಾರಿಣಿ ಸಭಾದ ಎರಡು ದಿನ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ವಸತಿ ಶಾಲೆಯ ಅಗತ್ಯದ ಬಗ್ಗೆ ಮಾತನಾಡಿದ್ದರು. ಆ ಐತಿಹಾಸಿಕ ಭೀಮಹೆಜ್ಜೆಗೆ ಶತಮಾನದ ಸಂಭ್ರಮ. ಈ ಭೀಮ ಹೆಜ್ಜೆ ಸಂಭ್ರಮ ಸತತ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯಲಿದ್ದು 15ನೇ ತಾರೀಕಿಗೆ ನಿಪ್ಪಾಣಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಏಪ್ರಿಲ್‌ 11 ರಿಂದ 15 ವರೆಗೆ ಬೆಂಗಳೂರಿನಿಂದ ನಿಪ್ಪಾಣಿಯವರೆಗೆ ಬೈಕ್ ಜಾಥಾವನ್ನು ಈ ಶತಮಾನ ಸಮಾರಂಭದ ನಿಮಿತ್ತ ಹಮ್ಮಿ ಕೊಳ್ಳಲಾಗಿದೆ ಎಂದು ಹೇಳಿದರು.

ಇನ್ನೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದರೂ ಭೀಮಹೆಜ್ಜೆ ಶತಮಾನದ ಸಂಭ್ರಮ ಮಾಡದೇ ಅಗೌರವ ತೋರಿದೆ. ಮೊನ್ನೆ ಮೊನ್ನೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ನಡೆಸಿಕೊಂಡ ರೀತಿ ಅಪಮಾನ ತೋರಿದೆ. ಇದು ಕಾಂಗ್ರೆಸ್ ಈಗಲೂ ಪಾಲಿಸುತ್ತಿರುವ ಪದ್ದತಿಯಾಗಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

4 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

6 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

20 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

24 hours ago