ರಾಜ್ಯ

ಕಾಂಗ್ರೆಸ್‌ ಪಕ್ಷ ಪ್ರಚಾರಕ್ಕಾಗಿ ಗಾಂಧೀಜಿ ಹೆಸರು ಬಳಕೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಬೆಳಗಾವಿ: ಗಾಂಧಿವಾದಿ ಎಂದು ಹೇಳಿಕೊಂಡಿರುವ ನಕಲಿ ಗಾಂಧಿಗಳು ತಮ್ಮ ಕಾಂಗ್ರೆಸ್‌ ಪಕ್ಷದ ಪ್ರಚಾರಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ದೂರಿದರು.

ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಕಾಂಗ್ರೆಸ್‌ ಪಕ್ಷವು ಮೂಲ ಕಾಂಗ್ರೆಸ್‌ ಪಕ್ಷವಲ್ಲ. ತಮ್ಮ ಬೆಳವಣಿಗೆಗಾಗಿ 1924ರಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಅಧ್ಯಕ್ಷತೆ ವಹಿಸಿಕೊಂಡಿದ್ದ ಗಾಂಧೀಜಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.

ಜೊತೆಗೆ ಕಾಂಗ್ರೆಸ್‌ ಪಕ್ಷವು ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಅವಮಾನಿಸಿತು. ಸಾರ್ವತ್ರಿಕ ಚುನಾವಣೆಗಳಲ್ಲಿ ಸೋಲಿಸಿತು. ಅವರ ಅಂತ್ಯಕ್ರಿಯೆಗೆ ನವದೆಹಲಿಯಲ್ಲಿ ಅನುಮತಿ ನೀಡದೆ ಮುಂಬೈನಲ್ಲಿ ನಡೆಸಲಾಯಿತು ಎಂದು ತಿಳಿಸಿದರು.

ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್‌ ಶುಲ್ಕ ಭರಿಸಲು ಹಣವಿಲ್ಲದಿರುವಾಗ, ಇಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಸಮಾವೇಶಕ್ಕೆ ಸರ್ಕಾರದ ಹಣ ಬಳಸಲಾಗುತ್ತಿದೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

13 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

13 hours ago