ರಾಜ್ಯ

ಸಿದ್ದರಾಮಯ್ಯನವರೇ, ಏನು ಮಾಡಿಲ್ಲ ಅಂದ್ರೆ ಮುಡಾ ಹಗರಣ ಸಿಬಿಐ ತನಿಖೆಗೆ ಕೊಡಿ ; ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಎನು ಮಾಡಿಲ್ಲ ಅನ್ನೋದಾದ್ರೆ ಸಿದ್ದರಾಮಯ್ಯನವರೇ  ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವಿಜಯನಗರದಲ್ಲಿ ಯಾಕೆ ನಿಮಗೆ ಸೈಟ್‌ ಕೊಟ್ಟಿದಾರೆ. ಈ ಬಗ್ಗೆ ನೀವು ೨೦೧೩ ಚುನಾವಣೆಯಲ್ಲಿ ಅಫಿಡೆವಿಟ್‌ ನಲ್ಲಿ ಮಾಹಿತಿ ಕೊಟ್ಟಿಲ್ಲ. ಸಿದ್ದರಾಮಯ್ಯ ೧೪ ಸೈಟ್‌ ಪಡೆದಿದ್ದಾರೆ, ಬಿಜೆಪಿಯವರು ಕೊಟ್ರು ಅಂತಾರೆ. ಅಕಸ್ಮಾತ್‌ ಬಿಜೆಪಿಯವರು ಕೊಟ್ಟಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಿ. ಸಿದ್ದರಾಮಯ್ಯ ನವರೇ ನಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ. ನೀವು ಏನು ಮಾಡಿಲ್ಲ ಅಂದರೆ ಸಿಬಿಐ ತನಿಖೆಗೆ ಕೊಡಿ. ನಾವು ಪ್ರತಿಭಟನೆ ಮಾಡೋಕ್ಕೆ ಹೋದ್ರೆ ಪೊಲೀಸರಿಂದ ಬಂಧಿಸುತ್ತೀರಿ. ಸಂವಿಧಾನ ಹತ್ಯೆ ಮಾಡುವ ಕೆಲಸ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೆ ಒಂದೂವರೆ ವರ್ಷದಿಂದ ಸರ್ಕಾರ ಭಯಂಕರ ಭ್ರಷ್ಟಚಾರ ಎಸಗಿದೆ. ರಾಹುಲ್‌ ಗಾಂಧಿ, ಇನ್ನೀತರ ನಾಯಕರಿಂದ ಭಯಂಕರ ಭ್ರಷ್ಟಚಾರ ಶುರು ಆಗಿದೆ. ಅಹಿಂದ ಅಹಿಂದ ಎಂದುಕೊಂಡು ಎಸ್‌ ಸಿ –ಎಸ್‌ ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಉಪಯೋಗ ಮಾಡಿದ್ದಾರೆ. ಸಿದ್ದರಾಮಯ್ಯ ಕಡುಭ್ರಷ್ಟ ಅಪ್ರಾಮಾಣಿಕ. ವಾಲ್ಮೀಕಿ ನಿಗಮದ ಹಣ ನೂರಾರು ಜನರಿಗೆ ಟ್ಯಾನ್ಸ್ಫರ್‌ ಮಾಡಿದ್ದಾರೆ. ನಿನ್ನೆ ಕೆಲ ಅಧಿಕಾರಿಗಳು ಸಿಕ್ಕಿದ್ದರು. ಬೆಂಗಳೂರಿನಲ್ಲಿ ಕೆಲ ಪ್ರಮುಖ ಅಧಿಕಾರಿಗಳು ಸಿಕ್ಕಿದ್ದರು. ಎಲ್ಲಾ ಹಣ ಹೈದರಾಬಾದ ಕಂಪನಿಗಳಿಗೆ ಹಣ ಹೋಗಿದೆ. ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಗೆ ಗೊತ್ತಿದ್ದೆ ಮಾಡಿದ್ದು ಎಂದು ಆರೋಪಿಸಿದರು.

ಈ ಹಗರಣದ ಬಗ್ಗೆ ರಾಹುಲ್‌ ಗಾಂಧಿ ಇವತ್ತಿನವರೆಗೂ ಒಂದು ಮಾತಾಡಿಲ್ಲ. ಇದಕ್ಕೆ ರಾಹುಲ್‌ ಹಾಗೂ ಸಿದ್ದರಾಮಯ್ಯ ಇಬ್ಬರು ಜವಾಬ್ದಾರರು. ೪೦ ದಿನ ಆದರೂ ನಾಗೇಂದ್ರಗೆ ನೋಟಿಸ್‌ ಕೊಟ್ಟಿರಲಿಲ್ಲ. ಇಡಿ ಎಂಟ್ರಿ ಆದಾಗ ನೋಟಿಸ್‌ ಕೊಟ್ಟಿದ್ದಾರೆ. ಐಶಾರಾಮಿ ಹೋಟೆಲ್‌ ಗೆ ಕರೆದು ವಿಚಾರಣೆ ಮಾಡುವ ನಾಟಕ ಮಾಡಿದರು. ಐಷಾರಾಮಿ ಹೋಟೆಲ್‌ ಬಿಲ್‌ ಕಟ್ಟಿದ್ದು ಕೂಡ ಎಸ್‌ ಐಟಿ ಎಂದು ಕಿಡಿಕಾರಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

1 hour ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

2 hours ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

3 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

3 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

3 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

3 hours ago