ರಾಜ್ಯ

ಸಿದ್ದರಾಮಯ್ಯನವರೇ, ಏನು ಮಾಡಿಲ್ಲ ಅಂದ್ರೆ ಮುಡಾ ಹಗರಣ ಸಿಬಿಐ ತನಿಖೆಗೆ ಕೊಡಿ ; ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಎನು ಮಾಡಿಲ್ಲ ಅನ್ನೋದಾದ್ರೆ ಸಿದ್ದರಾಮಯ್ಯನವರೇ  ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವಿಜಯನಗರದಲ್ಲಿ ಯಾಕೆ ನಿಮಗೆ ಸೈಟ್‌ ಕೊಟ್ಟಿದಾರೆ. ಈ ಬಗ್ಗೆ ನೀವು ೨೦೧೩ ಚುನಾವಣೆಯಲ್ಲಿ ಅಫಿಡೆವಿಟ್‌ ನಲ್ಲಿ ಮಾಹಿತಿ ಕೊಟ್ಟಿಲ್ಲ. ಸಿದ್ದರಾಮಯ್ಯ ೧೪ ಸೈಟ್‌ ಪಡೆದಿದ್ದಾರೆ, ಬಿಜೆಪಿಯವರು ಕೊಟ್ರು ಅಂತಾರೆ. ಅಕಸ್ಮಾತ್‌ ಬಿಜೆಪಿಯವರು ಕೊಟ್ಟಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಿ. ಸಿದ್ದರಾಮಯ್ಯ ನವರೇ ನಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ. ನೀವು ಏನು ಮಾಡಿಲ್ಲ ಅಂದರೆ ಸಿಬಿಐ ತನಿಖೆಗೆ ಕೊಡಿ. ನಾವು ಪ್ರತಿಭಟನೆ ಮಾಡೋಕ್ಕೆ ಹೋದ್ರೆ ಪೊಲೀಸರಿಂದ ಬಂಧಿಸುತ್ತೀರಿ. ಸಂವಿಧಾನ ಹತ್ಯೆ ಮಾಡುವ ಕೆಲಸ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೆ ಒಂದೂವರೆ ವರ್ಷದಿಂದ ಸರ್ಕಾರ ಭಯಂಕರ ಭ್ರಷ್ಟಚಾರ ಎಸಗಿದೆ. ರಾಹುಲ್‌ ಗಾಂಧಿ, ಇನ್ನೀತರ ನಾಯಕರಿಂದ ಭಯಂಕರ ಭ್ರಷ್ಟಚಾರ ಶುರು ಆಗಿದೆ. ಅಹಿಂದ ಅಹಿಂದ ಎಂದುಕೊಂಡು ಎಸ್‌ ಸಿ –ಎಸ್‌ ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಉಪಯೋಗ ಮಾಡಿದ್ದಾರೆ. ಸಿದ್ದರಾಮಯ್ಯ ಕಡುಭ್ರಷ್ಟ ಅಪ್ರಾಮಾಣಿಕ. ವಾಲ್ಮೀಕಿ ನಿಗಮದ ಹಣ ನೂರಾರು ಜನರಿಗೆ ಟ್ಯಾನ್ಸ್ಫರ್‌ ಮಾಡಿದ್ದಾರೆ. ನಿನ್ನೆ ಕೆಲ ಅಧಿಕಾರಿಗಳು ಸಿಕ್ಕಿದ್ದರು. ಬೆಂಗಳೂರಿನಲ್ಲಿ ಕೆಲ ಪ್ರಮುಖ ಅಧಿಕಾರಿಗಳು ಸಿಕ್ಕಿದ್ದರು. ಎಲ್ಲಾ ಹಣ ಹೈದರಾಬಾದ ಕಂಪನಿಗಳಿಗೆ ಹಣ ಹೋಗಿದೆ. ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಗೆ ಗೊತ್ತಿದ್ದೆ ಮಾಡಿದ್ದು ಎಂದು ಆರೋಪಿಸಿದರು.

ಈ ಹಗರಣದ ಬಗ್ಗೆ ರಾಹುಲ್‌ ಗಾಂಧಿ ಇವತ್ತಿನವರೆಗೂ ಒಂದು ಮಾತಾಡಿಲ್ಲ. ಇದಕ್ಕೆ ರಾಹುಲ್‌ ಹಾಗೂ ಸಿದ್ದರಾಮಯ್ಯ ಇಬ್ಬರು ಜವಾಬ್ದಾರರು. ೪೦ ದಿನ ಆದರೂ ನಾಗೇಂದ್ರಗೆ ನೋಟಿಸ್‌ ಕೊಟ್ಟಿರಲಿಲ್ಲ. ಇಡಿ ಎಂಟ್ರಿ ಆದಾಗ ನೋಟಿಸ್‌ ಕೊಟ್ಟಿದ್ದಾರೆ. ಐಶಾರಾಮಿ ಹೋಟೆಲ್‌ ಗೆ ಕರೆದು ವಿಚಾರಣೆ ಮಾಡುವ ನಾಟಕ ಮಾಡಿದರು. ಐಷಾರಾಮಿ ಹೋಟೆಲ್‌ ಬಿಲ್‌ ಕಟ್ಟಿದ್ದು ಕೂಡ ಎಸ್‌ ಐಟಿ ಎಂದು ಕಿಡಿಕಾರಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago