ರಾಜ್ಯ

ಅವಿವಾಹಿತರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ಜೀವನ ಸಂಗಮ ಪೋರ್ಟಲ್‌ ಆರಂಭ

ಬೆಂಗಳೂರು: ಅವಿವಾಹಿತ ಯುವಕರು ಹುಡುಗಿ ಸಿಗುತ್ತಿಲ್ಲ ಎಂದು ಇನ್ನುಮುಂದೆ ಸಂಕಟಪಡುವ ಹಾಗೂ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್‌ ಒಂದನ್ನು ತೆರೆದಿದೆ.

ಈ ಪೋರ್ಟಲ್‌ನಿಂದ ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕೂಡಿ ಬರಲಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಮೊದಲಿಗೆ ಜೀವನ ಸಂಗಮ ಎಂಬ ಪೋರ್ಟಲ್‌ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.

ಇ ಪೋರ್ಟಲ್‌ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ಡೇಟಾವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ.

ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ-ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ವೇದಿಕೆ ಒದಗಿಸಲಿದ್ದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ, ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago