ರಾಜ್ಯ

ಅವಿವಾಹಿತರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ಜೀವನ ಸಂಗಮ ಪೋರ್ಟಲ್‌ ಆರಂಭ

ಬೆಂಗಳೂರು: ಅವಿವಾಹಿತ ಯುವಕರು ಹುಡುಗಿ ಸಿಗುತ್ತಿಲ್ಲ ಎಂದು ಇನ್ನುಮುಂದೆ ಸಂಕಟಪಡುವ ಹಾಗೂ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್‌ ಒಂದನ್ನು ತೆರೆದಿದೆ.

ಈ ಪೋರ್ಟಲ್‌ನಿಂದ ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕೂಡಿ ಬರಲಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಮೊದಲಿಗೆ ಜೀವನ ಸಂಗಮ ಎಂಬ ಪೋರ್ಟಲ್‌ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.

ಇ ಪೋರ್ಟಲ್‌ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ಡೇಟಾವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ.

ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ-ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ವೇದಿಕೆ ಒದಗಿಸಲಿದ್ದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ, ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago