ರಾಜ್ಯ

ಅವಿವಾಹಿತರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ಜೀವನ ಸಂಗಮ ಪೋರ್ಟಲ್‌ ಆರಂಭ

ಬೆಂಗಳೂರು: ಅವಿವಾಹಿತ ಯುವಕರು ಹುಡುಗಿ ಸಿಗುತ್ತಿಲ್ಲ ಎಂದು ಇನ್ನುಮುಂದೆ ಸಂಕಟಪಡುವ ಹಾಗೂ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್‌ ಒಂದನ್ನು ತೆರೆದಿದೆ.

ಈ ಪೋರ್ಟಲ್‌ನಿಂದ ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕೂಡಿ ಬರಲಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಮೊದಲಿಗೆ ಜೀವನ ಸಂಗಮ ಎಂಬ ಪೋರ್ಟಲ್‌ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.

ಇ ಪೋರ್ಟಲ್‌ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ಡೇಟಾವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ.

ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ-ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ವೇದಿಕೆ ಒದಗಿಸಲಿದ್ದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ, ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

1 hour ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

2 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

2 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

2 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

2 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

3 hours ago