ರಾಜ್ಯ

ಧರ್ಮಸ್ಥಳದಲ್ಲಿ ಅಸಹಜ ಸಾವು ಪ್ರಕರಣ: ಇಂದಿನಿಂದ ವಿಚಾರಣೆ ಆರಂಭ

ಬೆಂಗಳೂರು: ಧರ್ಮಸ್ಥಳದ ಭಾಗದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಹಾಗೂ ಅತ್ಯಾಚಾರ ಪ್ರಕರಣಗಳನ್ನು ಡಿಜಿಪಿ ಪ್ರಣವ್ ಮೊಹಂತಿ ಅವರ ನೇತೃತ್ವದ ವಿಶೇಷ ತನಿಖಾ ದಳ ಇಂದಿನಿಂದ ವಿಚಾರಣೆ ಆರಂಭಿಸಿದೆ.

ಧರ್ಮಸ್ಥಳಕ್ಕೆ ಭೇಟಿ ನೀಡಿದ ಎಸ್‍ಐಟಿ ತಂಡ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳು ಹಾಗೂ ಅಪರಿಚಿತ ಶವಗಳ ದತ್ತಾಂಶಗಳನ್ನು ಪರಿಶೀಲಿಸಿದೆ. ನಾಲ್ಕು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ತಂಡ ಪ್ರತ್ಯೇಕ ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ಮೂಲಕ ವಿಚಾರಣೆ ಆರಂಭಿಸಿದೆ. ತನಿಖಾ ವರದಿಯನ್ನು ಸಲ್ಲಿಸಲು ಎಸ್‍ಐಟಿಗೆ ಮೂರು ತಿಂಗಳ ಕಾಲಾವಕಾಶವಿದ್ದು, ಅಷ್ಟರಲ್ಲಿ ಅತ್ಯಂತ ಸಂಕೀರ್ಣವಾದ ಈ ಪ್ರಕರಣವನ್ನು ಬೇಧಿಸಲು ಮುಂದಾಗಿದೆ.

ಕಳೆದ 20 ವರ್ಷಗಳಿಂದಲೂ ನಾಪತ್ತೆಯಾಗಿರುವ ಪ್ರಕರಣಗಳ ಬೆನ್ನು ಹತ್ತಿದ್ದು, ಅಪರಿಚಿತ ಶವಗಳ ಪತ್ತೆಗೂ ಮುಂದಾಗಿದೆ. ಅಸಹಜ ಸಾವು ಹಾಗೂ ಕೊಲೆ ಮಾದರಿಯ ಪ್ರಕರಣಗಳಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಎಸ್‍ಐಟಿಯ ಒಂದು ತಂಡ ಮಾಹಿತಿ ಕಲೆ ಹಾಕಲಿದೆ. ಮತ್ತೊಂದು ತಂಡ ಧರ್ಮಸ್ಥಳ ಭಾಗದ ಬೇರೆ ಬೇರೆ ಪ್ರದೇಶಗಳಲ್ಲಿ ಪತ್ತೆಯಾಗಬಹುದಾದ ಕಳೆಬರಹಗಳ ವಿಚಾರಣೆ ನಡೆಸಲಿದೆ.

ಅನಾಮಿಕ ವ್ಯಕ್ತಿಯೊಬ್ಬರು ಕಳೆದ ಜುಲೈನಲ್ಲಿ ವಕೀಲರ ಮೂಲಕ ಪತ್ರ ಬರೆದು ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ತಾವೇ ಖುದ್ದಾಗಿ ಸಂಸ್ಕಾರ ಮಾಡಿದ್ದು, ಅವು ಕೊಲೆ ಮತ್ತು ಅತ್ಯಾಚಾರಗಳಿಗೆ ಸಂಬಂಧಪಟ್ಟಿದ್ದವು ಎಂದು ಹೇಳಿದ್ದರು.

ಸದರಿ ವ್ಯಕ್ತಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಮುಂದುವರೆದ ಭಾಗವಾಗಿ ಕೆಲ ಸ್ಥಳಗಳ ಪರಿಶೀಲನೆಗೆ ಪೊಲೀಸ್ ಅಧಿಕಾರಿಗಳು ಸಹಕರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‍ಐಟಿ ರಚನೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

26 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

2 hours ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

4 hours ago