dharmasthala investigation
ಬೆಂಗಳೂರು: ಧರ್ಮಸ್ಥಳದ ಭಾಗದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಹಾಗೂ ಅತ್ಯಾಚಾರ ಪ್ರಕರಣಗಳನ್ನು ಡಿಜಿಪಿ ಪ್ರಣವ್ ಮೊಹಂತಿ ಅವರ ನೇತೃತ್ವದ ವಿಶೇಷ ತನಿಖಾ ದಳ ಇಂದಿನಿಂದ ವಿಚಾರಣೆ ಆರಂಭಿಸಿದೆ.
ಧರ್ಮಸ್ಥಳಕ್ಕೆ ಭೇಟಿ ನೀಡಿದ ಎಸ್ಐಟಿ ತಂಡ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳು ಹಾಗೂ ಅಪರಿಚಿತ ಶವಗಳ ದತ್ತಾಂಶಗಳನ್ನು ಪರಿಶೀಲಿಸಿದೆ. ನಾಲ್ಕು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ತಂಡ ಪ್ರತ್ಯೇಕ ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ಮೂಲಕ ವಿಚಾರಣೆ ಆರಂಭಿಸಿದೆ. ತನಿಖಾ ವರದಿಯನ್ನು ಸಲ್ಲಿಸಲು ಎಸ್ಐಟಿಗೆ ಮೂರು ತಿಂಗಳ ಕಾಲಾವಕಾಶವಿದ್ದು, ಅಷ್ಟರಲ್ಲಿ ಅತ್ಯಂತ ಸಂಕೀರ್ಣವಾದ ಈ ಪ್ರಕರಣವನ್ನು ಬೇಧಿಸಲು ಮುಂದಾಗಿದೆ.
ಕಳೆದ 20 ವರ್ಷಗಳಿಂದಲೂ ನಾಪತ್ತೆಯಾಗಿರುವ ಪ್ರಕರಣಗಳ ಬೆನ್ನು ಹತ್ತಿದ್ದು, ಅಪರಿಚಿತ ಶವಗಳ ಪತ್ತೆಗೂ ಮುಂದಾಗಿದೆ. ಅಸಹಜ ಸಾವು ಹಾಗೂ ಕೊಲೆ ಮಾದರಿಯ ಪ್ರಕರಣಗಳಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಎಸ್ಐಟಿಯ ಒಂದು ತಂಡ ಮಾಹಿತಿ ಕಲೆ ಹಾಕಲಿದೆ. ಮತ್ತೊಂದು ತಂಡ ಧರ್ಮಸ್ಥಳ ಭಾಗದ ಬೇರೆ ಬೇರೆ ಪ್ರದೇಶಗಳಲ್ಲಿ ಪತ್ತೆಯಾಗಬಹುದಾದ ಕಳೆಬರಹಗಳ ವಿಚಾರಣೆ ನಡೆಸಲಿದೆ.
ಅನಾಮಿಕ ವ್ಯಕ್ತಿಯೊಬ್ಬರು ಕಳೆದ ಜುಲೈನಲ್ಲಿ ವಕೀಲರ ಮೂಲಕ ಪತ್ರ ಬರೆದು ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ತಾವೇ ಖುದ್ದಾಗಿ ಸಂಸ್ಕಾರ ಮಾಡಿದ್ದು, ಅವು ಕೊಲೆ ಮತ್ತು ಅತ್ಯಾಚಾರಗಳಿಗೆ ಸಂಬಂಧಪಟ್ಟಿದ್ದವು ಎಂದು ಹೇಳಿದ್ದರು.
ಸದರಿ ವ್ಯಕ್ತಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಮುಂದುವರೆದ ಭಾಗವಾಗಿ ಕೆಲ ಸ್ಥಳಗಳ ಪರಿಶೀಲನೆಗೆ ಪೊಲೀಸ್ ಅಧಿಕಾರಿಗಳು ಸಹಕರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…