ರಾಜ್ಯ

ಹುಲಿಗಳ ಅಸಹಜ ಸಾವು ಪ್ರಕರಣ: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಳ್ಳಬೇಕು. ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

8 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

13 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago