dinesh gundurao
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ ಎಂದು ತಿಳಿಸಿದರು.
ಇದನ್ನು ಓದಿ: ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ
ಈ ಬಗ್ಗೆ ದೂರುಗಳು ಬಂದಲ್ಲಿ ನಿಯಮ ಉಲ್ಲಂಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಽನಿಯಮದ ಸೆಕ್ಷನ್ ೧೫ ಉಪಬಂಧ ೧ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ. ಅಽನಿಯಮದ ಸೆಕ್ಷನ್ ೧೫ ಉಪಬಂಧ ೧ರನ್ವಯ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…