ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಎಂಎಲ್ಸಿ ಸೂರಜ್ ರೇವಣ್ಣನನ್ನು ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಸೂರಜ್ ರೇವಣ್ಣ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು(ಜು.1) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ದಾಖಲಾದ ಪ್ರಕರಣದಲ್ಲಿ ಜೂನ್22ರಂದು ಸೂರಜ್ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಅವರ ಕಸ್ಟಡಿ ಅಂತ್ಯವಾದ ಹಿನ್ನೆಲೆ, ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್ ಸೂರಜ್ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.
ಸೂರಜ್ ರೇವಣ್ಣರನ್ನು ಮತ್ತೆ ಆರು ದಿನ ಕಸ್ಟಡಿಗೆ ನೀಡುವಂತೆ ಎಸ್ಪಿಪಿ ಅಶೋಕ್ ನಾಯಕ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ವಾಯ್ಸ್ ಸ್ಯಾಂಪಲ್ಸ್ ಸಂಗ್ರಹ ಮಾಡಬೇಕಿದೆ, ಪ್ರತಿನಿತ್ಯ ಏನೆಲ್ಲಾ ತನಿಖೆ ನಡೆದಿದೆ, ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಎಂಟು ದಿನ ಕಸ್ಟಡಿಯಲ್ಲಿದ್ದಾಗ ಏನಾದೂ ತೊಂದರೆ ನೀಡಿದರಾ ಎಂದು ಸೂರಜ್ಗೆ ಜಡ್ಜ್ ಪ್ರಶ್ನೆ ಕೇಳಿದರು. ಯಾವುದೇ ತೊಂದರೆ ನೀಡಿಲ್ಲ ಎಂದು ಸೂರಜ್ ಉತ್ತರಿಸಿದ್ದಾರೆ. ಬಳಿಕ 2 ದಿನ ಕಸ್ಟಡಿ ವಿಸ್ತರಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…