ರಾಜ್ಯ

800 ಸರ್ಕಾರಿ ಶಾಲೆಗಳ ಉನ್ನತೀಕರಣ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯಾದ್ಯಂತ 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, 400 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಈ ಕುರಿತು ಮಾತನಾಡಿದ ಅವರು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು. ಏಷ್ಯಾ ಅಭಿವೃದ್ಧಿ ಬ್ಯಾಂಕ್‍ನ ಸಹಯೋಗದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನಿಧಿಯ ಮೂಲಕ 200 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. ಗಣಿ ಪರಿಸರ ಪುನಶ್ಚೇತನ ನಿಗಮದ ವತಿಯಿಂದ 10 ತಾಲ್ಲೂಕುಗಳಲ್ಲಿ 100 ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಿ ಪ್ರತ್ಯೇಕ ಡಿಪಿಎಆರ್ ತಯಾರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2ರಿಂದ 3 ಕೆಪಿಎಸ್ ಶಾಲೆಗಳು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತಿ ತಾಲ್ಲೂಕಿನಲ್ಲಿ 4ರಿಂದ 5 ಶಾಲೆಗಳನ್ನು ಉನ್ನತೀಕರಿಸಲಾಗುವುದು ಎಂದು ಹೇಳಿದರು.

ಇದನ್ನು ಓದಿ: SSLC : ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಇನ್ಮುಂದೆ ಶೇ.33 ಅಂಕ ಪಡೆದರೆ ಪಾಸ್‌

ಸಮೀಕ್ಷೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗವಹಿಸುತ್ತಿದ್ದಾರೆ. ಅವರಿಗೆಲ್ಲಾ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದ ಅವರು, ನಿನ್ನೆಯವರೆಗೆ ಜಿಬಿಎ ಹೊರತುಪಡಿಸಿ ಶೇ.91.46ರಷ್ಟು ಪ್ರಗತಿ ಸಾಧಿಸಲಾಗಿದೆ,.ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಸಾಕಷ್ಟು ಶಿಕ್ಷಕರಿಗೆ ಸಾರ್ವಜನಿಕರು ತೊಂದರೆ ಕೊಟ್ಟಿದ್ದಾರೆ. ಆದರೂ ಕೂಡ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಪಾಠ ಮಾಡುತ್ತಾರೆ. ಹೀಗಾಗಿ ಮಕ್ಕಳಿಗೆ ಪಾಠದ ವಿಚಾರದಲ್ಲಿ ತೊಂದರೆ ಆಗುವುದಿಲ್ಲ.ಬೆಂಗಳೂರಿನಲ್ಲೂ ನಿಗದಿತ ಸಮಯದಲ್ಲಿ ಸಮೀಕ್ಷೆ ಪೂರ್ಣಗೊಳಿಸುವ ವಿಶ್ವಾಸವಿದೆ. ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ, ಒತ್ತಡದ ಮಧ್ಯೆಯೂ ಶಿಕ್ಷಕರು ತುಂಬ ಪ್ರಾಮಾಣಿಕವಾಗಿ ಸಮೀಕ್ಷೆ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾಷಾ ಆಯ್ಕೆಯ ಸೌಲಭ್ಯ!
ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಬದಲಾವಣೆಯೆಂದರೆ ಭಾಷಾ ಆಯ್ಕೆಯ ಸೌಲಭ್ಯ. 2025-26ರ ಶೈಕ್ಷಣಿಕ ಸಾಲಿನಿಂದ ಐದನೇ ತರಗತಿವರೆಗೆ ದ್ವಿಭಾಷಾ ಪದ್ಧತಿಯನ್ನು ಜಾರಿಗೆ ತರಲಾಗುವುದು. ಈ ಪದ್ಧತಿಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಲಿಕೆಯ ಮಾಧ್ಯಮವಾಗಿ ಬಳಸಲಾಗುತ್ತದೆ. ಆದರೆ, ಐದನೇ ತರಗತಿಯ ನಂತರ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ತಮಗೆ ಬೇಕಾದ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಅಂದರೆ, ಕನ್ನಡ ಮಾಧ್ಯಮದಲ್ಲಿ ಓದುವುದಾದರೂ, ಇಂಗ್ಲಿಷ್ ಮಾಧ್ಯಮದಲ್ಲಿ ಓದುವುದಾದರೂ, ಆಯ್ಕೆಯ ಸ್ವಾತಂತ್ರ್ಯವನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನೀಡಲಾಗಿದೆ.

ಭಾಷಾ ಆಯ್ಕೆಯ ನಿಯಮವು ಶಿಕ್ಷಣವನ್ನು ಹೆಚ್ಚು ಸುಲಭ ಮತ್ತು ಸೌಕರ್ಯಯುತವಾಗಿಸುವ ಗುರಿಯನ್ನು ಹೊಂದಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯ ಉಳಿವಿಗೆ ಮತ್ತು ಪ್ರಚಾರಕ್ಕೆ ಒತ್ತು ನೀಡುವುದರ ಜೊತೆಗೆ, ಇಂಗ್ಲಿಷ್ ಮಾಧ್ಯಮದ ಮೂಲಕ ಜಾಗತಿಕ ಸ್ಪರ್ಧೆಗೆ ಸಿದ್ಧರಾಗುವ ಅವಕಾಶವನ್ನೂ ಸರ್ಕಾರ ಒದಗಿಸುತ್ತಿದೆ. ಈ ದ್ವಿಭಾಷಾ ಪದ್ಧತಿಯಿಂದ ಮಕ್ಕಳು ಎರಡೂ ಭಾಷೆಗಳಲ್ಲಿ ಪರಿಣಿತರಾಗಬಹುದು. ಐದನೇ ತರಗತಿಯ ನಂತರ ಭಾಷೆಯ ಆಯ್ಕೆಯ ಸ್ವಾತಂತ್ರ್ಯವು ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ ಮತ್ತು ಸಾಮಥ್ರ್ಯಕ್ಕೆ ತಕ್ಕಂತೆ ಶಿಕ್ಷಣ ಪಡೆಯಲು ಸಹಾಯ ಮಾಡುತ್ತದೆ.

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

38 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

42 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

49 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

55 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago