ಬೆಂಗಳೂರು: ಇದೇ ಸೆಪ್ಟೆಂಬರ್.22ರಂದು ಯುಪಿಎಸ್ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರಕ್ಕೆ ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲ. ಯುಪಿಎಸ್ಸಿ ಪರೀಕ್ಷೆ ನಡೆಯುವ ದಿನದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡಿದ್ದಾರೆ. ಈ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದ್ದಾರೆ ಎಂದು ಕಿಡಿಕಾರಿದೆ.
ಯುಪಿಎಸ್ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್.16ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್.22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ.
ವಿವೇಚನೆ ಇಲ್ಲದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆಪ್ಟೆಂಬರ್.22ರಂದೇ ನಡೆಸುವುದಾಗಿ ಪ್ರಕಟಿಸಿದೆ.
ಈ ಮೂಲಕ ರಾಜ್ಯ ಸರ್ಕಾರ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿ ಇಡುವ ಕೆಲಸ ಮಾಡಿದೆ ಎಂದು ಕಿಡಿಕಾರಿದೆ.
ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪಿಎಸ್ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ಬಿಜೆಪಿ ಆಗ್ರಹಿಸಿದೆ.
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…