ರಾಜ್ಯ

UPSC ಪರೀಕ್ಷೆ ದಿನವೇ PSI ಪರೀಕ್ಷೆ: ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ

ಬೆಂಗಳೂರು: ಇದೇ ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರಕ್ಕೆ ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲ. ಯುಪಿಎಸ್‌ಸಿ ಪರೀಕ್ಷೆ ನಡೆಯುವ ದಿನದಂದೇ ಪಿಎಸ್‌ಐ ಪರೀಕ್ಷೆ ದಿನಾಂಕ ನಿಗದಿ ಮಾಡಿದ್ದಾರೆ. ಈ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದ್ದಾರೆ ಎಂದು ಕಿಡಿಕಾರಿದೆ.

ಯುಪಿಎಸ್‌ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್.‌16ರಂದು ಯುಪಿಎಸ್‌ಸಿ ಪ್ರಿಲಿಮ್ಸ್‌ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್.‌22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ.

ವಿವೇಚನೆ ಇಲ್ಲದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.‌22ರಂದೇ ನಡೆಸುವುದಾಗಿ ಪ್ರಕಟಿಸಿದೆ.

ಈ ಮೂಲಕ ರಾಜ್ಯ ಸರ್ಕಾರ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿ ಇಡುವ ಕೆಲಸ ಮಾಡಿದೆ ಎಂದು ಕಿಡಿಕಾರಿದೆ.

ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪಿಎಸ್‌ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ಬಿಜೆಪಿ ಆಗ್ರಹಿಸಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago