ನವದೆಹಲಿ: 2023 ರ ಸೆಪ್ಟೆಂಬರ್ 15 ರಿಂದ 24 ವರೆಗೆ ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ್ದ ನಾಗರೀಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು (ಮಂಗಳವಾರ, ಏ.೧೬) ಪ್ರಕಟಿಸಿದೆ.
ಈ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಿರೋಟ ಗ್ರಾಮದ ಚಂದನ್ ಬಿಎಸ್ ಅವರು 731 ರ್ಯಾಂಕ್ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಪರೀಕ್ಷೆಯಲ್ಲಿ ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ದೇಶಕ್ಕೆ ಮೊದಲನೇ ರ್ಯಾಂಕ್ ಪಡೆದು ತೇರ್ಗಡೆಹೊಂದಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಅನಿಮೇಶ್ ಪ್ರಧಾನ್ ಹಾಗೂ ತೃತೀಯ ಸ್ಥಾನದಲ್ಲಿ ಡೋಣೂರು ಅನನ್ಯಾ ರೆಡ್ಡಿ ಅವರು ಕಾಣಿಸಿಕೊಂಡಿದ್ದಾರೆ.
ಒಟ್ಟು 1.016 ಮಂದಿ ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಅವರನ್ನು ವಿವಿಧ ಕೇಂದ್ರದ ಸೇವೆಗಳಿಗೆ ನೇಮಿಸಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಫಲಿತಾಂಶವನ್ನು ಯುಪಿಎಸ್ಸಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
2023 ರ ಸೆಪ್ಟೆಂಬರ್ ನಲ್ಲಿ ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಹಾಗೂ ಎ ಮತ್ತು ಬಿ ವೃಂದದ ಕೇಂದ್ರ ಸೇವೆಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲು ಸಾಮಾನ್ಯ ವರ್ಗದಿಂದ 347, ಆರ್ಥಿಕವಾಗಿ ದುರ್ಬಲ ವರ್ಗ 115, ಹಿಂದುಳಿದ ವರ್ಗ 303, ಪರಿಶಿಷ್ಟ ಜಾತಿ 165, ಪರಿಶಿಷ್ಟ ಪಂಗಡ 86 ಅಭ್ಯರ್ಥಿಗಳು ಉತ್ತೀರ್ಣಗೊಂಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…