ರಾಜ್ಯ

ಯೂರಿಯಾ ಪೂರೈಕೆ ಕಡಿತ ; ಸಾವಯುವ ಕೃಷಿಯ ಬಗ್ಗೆ ಅರಿವು ಮೂಡಿಸಲಾಗುವುದು : ಸಚಿವ ಚಲುವರಾಯಸ್ವಾಮಿ

ಮೈಸೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ, ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ 50% ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಅವರು ಸುದ್ದಿ ಗೋಷ್ಟಿ ಯಲ್ಲಿ ಈ ವಿಷಯ ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೂಮಿಯ ಫಲವತ್ತತೆ ಕಾಯ್ದುಕೊಳ್ಳುವ ಉದ್ದೇಶದಿಂದ ಯೂರಿಯಾ ಬಳಕೆ‌ ಕಡೆಮೆ ಮಾಡಲು ಕರೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ಎರೆಡು ವರ್ಷಗಳಿಂದ ರಾಸಾಯನಿಕಗಳು ಹಾಗೂ ಕೀಟನಾಶಕಗಳ ಬಳಕೆ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಾವಯವ ಕೃಷಿ, ಸಮಗ್ರ ಬೇಸಾಯದ ಲಾಭಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರಾಜ್ಯಾದ್ಯಂತ ಮಳೆ ಉತ್ತಮವಾಗಿದ್ದು ಬಿತ್ತನೆ ಚುರುಕುಗೊಂಡಿದೆ. ಪೂರ್ವ ಮುಂಗಾರು ಅಧಿಕವಾಗಿ ಸುರಿದು ಕೆಲವೆಡೆ ಹಾನಿ ಮಾಡಿದೆ. ರೈತರು ಪ್ರತಿ ವರ್ಷ ಬೆಳೆವಿಮೆ ಮಾಡಿಸಿ ಸಂಭವನೀಯ ನಷ್ಟ ಕಡಿತ ಮಾಡಿಕೊಳ್ಳಬೇಕು ಎಂದು ಕೃಷಿ ‌ಸಚಿವರು ಕರೆ ನೀಡಿದರು.

2023-24 ರಲ್ಲಿ ಬರ ಪರಿಸ್ಥಿತಿ ಕಾಡಿತ್ತು. ರೈತರ ಸಂಕಷ್ಟಕ್ಕೆ ಸ್ಪಂದಿಸಿ 3454 ಕೋಟಿ ರೂ ಬರಪರಿಹಾರ ನೀಡಲಾಗಿತ್ತು. 2024 -25 ನೇ ಸಾಲಿನಲ್ಲಿ ಗುರಿಗಿಂತ ಹೆಚ್ಚು ಅಂದರೆ 153 ಲಕ್ಷ ಟನ್ ಆಹಾರ ಉತ್ಪಾದನೆಯಾಗಿತ್ತು .ಈ ವರ್ಷ148.48 ಲಕ್ಷ ಮೆ.ಟನ್ ಆಹಾರ ಧಾನ್ಯ ಗಳು ಮತ್ತು 12.20 ಲಕ್ಷ ಟನ್ ಎಣ್ಣೆಕಾಳು ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಆಧ್ಯತೆ ನೀಡಲಾಗಿದೆ.

ಹಿಂದೆಂದೂ ಕಂಡಿರದ ಪ್ರಮಾಣದಲ್ಲಿ ಯಂತ್ರೋಪಕರಣಗಳು, ಸೂಕ್ಷ್ಮ ನೀರಾವರಿ ಸಲಕರಣೆಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೃಷಿ ಭಾಗ್ಯ ಯೋಜನೆ ಎಲ್ಲಾ ಕ್ಷೇತ್ರಗಳಿಗೆ ವಿಸ್ತರಿಸಲಾಗಿದ್ದು 24000 ಕೃಷಿ ಹೊಂಡ ನಿರ್ಮಾಣ ಗುರಿ ಪೂರೈಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ತಾವು ರಾಜ್ಯಾದ್ಯಂತ ಪ್ರವಾಸ ಮಾಡಿ ಕೃಷಿ ಯೋಜನೆಗಳ ಅನುಷ್ಠಾನ ಹಾಗೂ ಕೃಷಿ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಎಲ್ಲಾ ವಿಭಾಗಗಳಲ್ಲೂ ಅಧಿಕಾರಿಗಳ ಸಭೆ ಮಾಡಿ ಸಲಹೆ ,ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ ಜಿ.ಟಿ ಪುತ್ರ,ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹಮದ್ ಪರ್ವೇಜ್ ಬಂಥನಾಳ,ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್,ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸದಾನಂದ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

2 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

3 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

3 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

4 hours ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

7 hours ago