ರಾಜ್ಯ

ಯೂರಿಯಾ ಪೂರೈಕೆ ಕಡಿತ ; ಸಾವಯುವ ಕೃಷಿಯ ಬಗ್ಗೆ ಅರಿವು ಮೂಡಿಸಲಾಗುವುದು : ಸಚಿವ ಚಲುವರಾಯಸ್ವಾಮಿ

ಮೈಸೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ, ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ 50% ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಅವರು ಸುದ್ದಿ ಗೋಷ್ಟಿ ಯಲ್ಲಿ ಈ ವಿಷಯ ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೂಮಿಯ ಫಲವತ್ತತೆ ಕಾಯ್ದುಕೊಳ್ಳುವ ಉದ್ದೇಶದಿಂದ ಯೂರಿಯಾ ಬಳಕೆ‌ ಕಡೆಮೆ ಮಾಡಲು ಕರೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ಎರೆಡು ವರ್ಷಗಳಿಂದ ರಾಸಾಯನಿಕಗಳು ಹಾಗೂ ಕೀಟನಾಶಕಗಳ ಬಳಕೆ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಾವಯವ ಕೃಷಿ, ಸಮಗ್ರ ಬೇಸಾಯದ ಲಾಭಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರಾಜ್ಯಾದ್ಯಂತ ಮಳೆ ಉತ್ತಮವಾಗಿದ್ದು ಬಿತ್ತನೆ ಚುರುಕುಗೊಂಡಿದೆ. ಪೂರ್ವ ಮುಂಗಾರು ಅಧಿಕವಾಗಿ ಸುರಿದು ಕೆಲವೆಡೆ ಹಾನಿ ಮಾಡಿದೆ. ರೈತರು ಪ್ರತಿ ವರ್ಷ ಬೆಳೆವಿಮೆ ಮಾಡಿಸಿ ಸಂಭವನೀಯ ನಷ್ಟ ಕಡಿತ ಮಾಡಿಕೊಳ್ಳಬೇಕು ಎಂದು ಕೃಷಿ ‌ಸಚಿವರು ಕರೆ ನೀಡಿದರು.

2023-24 ರಲ್ಲಿ ಬರ ಪರಿಸ್ಥಿತಿ ಕಾಡಿತ್ತು. ರೈತರ ಸಂಕಷ್ಟಕ್ಕೆ ಸ್ಪಂದಿಸಿ 3454 ಕೋಟಿ ರೂ ಬರಪರಿಹಾರ ನೀಡಲಾಗಿತ್ತು. 2024 -25 ನೇ ಸಾಲಿನಲ್ಲಿ ಗುರಿಗಿಂತ ಹೆಚ್ಚು ಅಂದರೆ 153 ಲಕ್ಷ ಟನ್ ಆಹಾರ ಉತ್ಪಾದನೆಯಾಗಿತ್ತು .ಈ ವರ್ಷ148.48 ಲಕ್ಷ ಮೆ.ಟನ್ ಆಹಾರ ಧಾನ್ಯ ಗಳು ಮತ್ತು 12.20 ಲಕ್ಷ ಟನ್ ಎಣ್ಣೆಕಾಳು ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಆಧ್ಯತೆ ನೀಡಲಾಗಿದೆ.

ಹಿಂದೆಂದೂ ಕಂಡಿರದ ಪ್ರಮಾಣದಲ್ಲಿ ಯಂತ್ರೋಪಕರಣಗಳು, ಸೂಕ್ಷ್ಮ ನೀರಾವರಿ ಸಲಕರಣೆಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೃಷಿ ಭಾಗ್ಯ ಯೋಜನೆ ಎಲ್ಲಾ ಕ್ಷೇತ್ರಗಳಿಗೆ ವಿಸ್ತರಿಸಲಾಗಿದ್ದು 24000 ಕೃಷಿ ಹೊಂಡ ನಿರ್ಮಾಣ ಗುರಿ ಪೂರೈಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ತಾವು ರಾಜ್ಯಾದ್ಯಂತ ಪ್ರವಾಸ ಮಾಡಿ ಕೃಷಿ ಯೋಜನೆಗಳ ಅನುಷ್ಠಾನ ಹಾಗೂ ಕೃಷಿ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಎಲ್ಲಾ ವಿಭಾಗಗಳಲ್ಲೂ ಅಧಿಕಾರಿಗಳ ಸಭೆ ಮಾಡಿ ಸಲಹೆ ,ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ ಜಿ.ಟಿ ಪುತ್ರ,ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹಮದ್ ಪರ್ವೇಜ್ ಬಂಥನಾಳ,ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್,ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸದಾನಂದ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago