ರಾಜ್ಯ

ಯೂರಿಯಾ ಪೂರೈಕೆ ಕಡಿತ ; ಸಾವಯುವ ಕೃಷಿಯ ಬಗ್ಗೆ ಅರಿವು ಮೂಡಿಸಲಾಗುವುದು : ಸಚಿವ ಚಲುವರಾಯಸ್ವಾಮಿ

ಮೈಸೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ, ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ 50% ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಅವರು ಸುದ್ದಿ ಗೋಷ್ಟಿ ಯಲ್ಲಿ ಈ ವಿಷಯ ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೂಮಿಯ ಫಲವತ್ತತೆ ಕಾಯ್ದುಕೊಳ್ಳುವ ಉದ್ದೇಶದಿಂದ ಯೂರಿಯಾ ಬಳಕೆ‌ ಕಡೆಮೆ ಮಾಡಲು ಕರೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ಎರೆಡು ವರ್ಷಗಳಿಂದ ರಾಸಾಯನಿಕಗಳು ಹಾಗೂ ಕೀಟನಾಶಕಗಳ ಬಳಕೆ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಾವಯವ ಕೃಷಿ, ಸಮಗ್ರ ಬೇಸಾಯದ ಲಾಭಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರಾಜ್ಯಾದ್ಯಂತ ಮಳೆ ಉತ್ತಮವಾಗಿದ್ದು ಬಿತ್ತನೆ ಚುರುಕುಗೊಂಡಿದೆ. ಪೂರ್ವ ಮುಂಗಾರು ಅಧಿಕವಾಗಿ ಸುರಿದು ಕೆಲವೆಡೆ ಹಾನಿ ಮಾಡಿದೆ. ರೈತರು ಪ್ರತಿ ವರ್ಷ ಬೆಳೆವಿಮೆ ಮಾಡಿಸಿ ಸಂಭವನೀಯ ನಷ್ಟ ಕಡಿತ ಮಾಡಿಕೊಳ್ಳಬೇಕು ಎಂದು ಕೃಷಿ ‌ಸಚಿವರು ಕರೆ ನೀಡಿದರು.

2023-24 ರಲ್ಲಿ ಬರ ಪರಿಸ್ಥಿತಿ ಕಾಡಿತ್ತು. ರೈತರ ಸಂಕಷ್ಟಕ್ಕೆ ಸ್ಪಂದಿಸಿ 3454 ಕೋಟಿ ರೂ ಬರಪರಿಹಾರ ನೀಡಲಾಗಿತ್ತು. 2024 -25 ನೇ ಸಾಲಿನಲ್ಲಿ ಗುರಿಗಿಂತ ಹೆಚ್ಚು ಅಂದರೆ 153 ಲಕ್ಷ ಟನ್ ಆಹಾರ ಉತ್ಪಾದನೆಯಾಗಿತ್ತು .ಈ ವರ್ಷ148.48 ಲಕ್ಷ ಮೆ.ಟನ್ ಆಹಾರ ಧಾನ್ಯ ಗಳು ಮತ್ತು 12.20 ಲಕ್ಷ ಟನ್ ಎಣ್ಣೆಕಾಳು ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಆಧ್ಯತೆ ನೀಡಲಾಗಿದೆ.

ಹಿಂದೆಂದೂ ಕಂಡಿರದ ಪ್ರಮಾಣದಲ್ಲಿ ಯಂತ್ರೋಪಕರಣಗಳು, ಸೂಕ್ಷ್ಮ ನೀರಾವರಿ ಸಲಕರಣೆಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೃಷಿ ಭಾಗ್ಯ ಯೋಜನೆ ಎಲ್ಲಾ ಕ್ಷೇತ್ರಗಳಿಗೆ ವಿಸ್ತರಿಸಲಾಗಿದ್ದು 24000 ಕೃಷಿ ಹೊಂಡ ನಿರ್ಮಾಣ ಗುರಿ ಪೂರೈಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ತಾವು ರಾಜ್ಯಾದ್ಯಂತ ಪ್ರವಾಸ ಮಾಡಿ ಕೃಷಿ ಯೋಜನೆಗಳ ಅನುಷ್ಠಾನ ಹಾಗೂ ಕೃಷಿ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಎಲ್ಲಾ ವಿಭಾಗಗಳಲ್ಲೂ ಅಧಿಕಾರಿಗಳ ಸಭೆ ಮಾಡಿ ಸಲಹೆ ,ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ ಜಿ.ಟಿ ಪುತ್ರ,ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹಮದ್ ಪರ್ವೇಜ್ ಬಂಥನಾಳ,ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್,ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸದಾನಂದ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

11 hours ago