ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ವೇಟ್ ಸಲ್ಯುಷನ್ ಬಳಕೆ ಕಾರಣ ಎಂದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
ಕೇಂದ್ರೀಯ ಔಷಧ ಪ್ರಯೋಗಾಲಯದ ವರದಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಪರೀಕ್ಷೆ ನಡೆಸಿ ಗುಣಮಟ್ಟದ ಕೆಲವು ಬ್ಯಾಚ್ಗಳ ದ್ರಾವಣ ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ ಎಂದರು.
ಈ ವಾರದಲ್ಲಿ ಪರೀಕ್ಷೆ ವರದಿ ಬರಲಿದೆ. ನಂತರದಲ್ಲಿ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಮುಂಜಾಗ್ರತಾ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ವೇಟ್ ಬಳಕೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…