ಮೈಸೂರು : ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಾ ಮುತ್ತ ಡ್ರೋನ್ ಅಥವ ಕ್ಯಾಮೆರಾ ಬಳಕೆಗೆ ನಿಷೇಧ ಹೇರಲಾಗಿದೆ.
ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದು, ಪ್ರವಾಸಿಗರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲೆ ಮಾಡಬೇಕು ಇಲ್ಲವಾದಲ್ಲಿ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರು, ಪ್ರವಾಸಿಗರ ಚೆಲ್ಲಾಟಕ್ಕೆ ಬ್ರೇಕ್ ಹಾಕಲು ಈ ನಿಷೇಧ ಹೇರಲಾಗಿದೆ.
ಪ್ರವಾಸಿಗರು ಡ್ರೋನ್, ಮೊಬೈಲ್ ಕ್ಯಾಮರಾಗಳ ಮೂಲಕ ಮನ ಬಂದಂತೆ ಫೋಟೋ ತೆಗೆಯುತ್ತಿದ್ದರು. ಪ್ರತಿನಿತ್ಯ ದೇವಸ್ಥಾನದ ಬಳಿ ಬರುವ ಕಾಡಾನೆಯ ದೃಶ್ಯವನ್ನು ಸೆರೆ ಹಿಡಿದು ಕಾಡು ಪ್ರಾಣಿಗಳನ್ನ ಕೀಟಲೆ ಮಾಡುತ್ತಿದ್ದರು.
ಈ ಸಂಬಂಧ ವಲಯಾಧಿಕಾರಿ ಮಂಜುನಾಥ್ ಅವರು ತಹಶೀಲ್ದಾರ್ ಗೆ ದೂರು ನೀಡಿದ್ದರು. ಅರಣ್ಯಾಧಿಕಾರಿ ಕೋರಿಕೆ ಮೇರೆಗೆ ತಹಶೀಲ್ದಾರ್ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕ್ಯಾಮರಾ ಚಿತ್ರೀಕರಣ ಹಾಗೂ ಡ್ರೋನ್ ಬಳಕೆ ಮಾಡುವುದಕ್ಕೆ ಸಂಪೂರ್ಣ ನಿಷೇಧ ಮಾಡಿ ಮುಜರಾಯಿ ಇಲಾಖೆಯ ಅಧಿಕಾರಿ ಹಾಗೂ ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…