ರಾಜ್ಯ

ಹಿಮವದ್‌ ಗೋಪಾಲಸ್ವಾಮಿ ದೇವಾಲಯದ ಸುತ್ತಾ ಡ್ರೋನ್‌ ಬಳಕೆ ನಿಷೇಧ !

ಮೈಸೂರು : ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಾ ಮುತ್ತ ಡ್ರೋನ್‌ ಅಥವ ಕ್ಯಾಮೆರಾ ಬಳಕೆಗೆ ನಿಷೇಧ ಹೇರಲಾಗಿದೆ.

ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದು, ಪ್ರವಾಸಿಗರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲೆ ಮಾಡಬೇಕು ಇಲ್ಲವಾದಲ್ಲಿ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರು, ಪ್ರವಾಸಿಗರ ಚೆಲ್ಲಾಟಕ್ಕೆ ಬ್ರೇಕ್ ಹಾಕಲು ಈ ನಿಷೇಧ ಹೇರಲಾಗಿದೆ.

ಪ್ರವಾಸಿಗರು ಡ್ರೋನ್, ಮೊಬೈಲ್ ಕ್ಯಾಮರಾಗಳ ಮೂಲಕ ಮನ ಬಂದಂತೆ ಫೋಟೋ ತೆಗೆಯುತ್ತಿದ್ದರು. ಪ್ರತಿನಿತ್ಯ ದೇವಸ್ಥಾನದ ಬಳಿ ಬರುವ ಕಾಡಾನೆಯ ದೃಶ್ಯವನ್ನು ಸೆರೆ ಹಿಡಿದು  ಕಾಡು ಪ್ರಾಣಿಗಳನ್ನ ಕೀಟಲೆ ಮಾಡುತ್ತಿದ್ದರು.

ಈ ಸಂಬಂಧ ವಲಯಾಧಿಕಾರಿ ಮಂಜುನಾಥ್ ಅವರು ತಹಶೀಲ್ದಾರ್ ಗೆ ದೂರು ನೀಡಿದ್ದರು. ಅರಣ್ಯಾಧಿಕಾರಿ ಕೋರಿಕೆ ಮೇರೆಗೆ ತಹಶೀಲ್ದಾರ್ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು,  ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕ್ಯಾಮರಾ ಚಿತ್ರೀಕರಣ ಹಾಗೂ ಡ್ರೋನ್ ಬಳಕೆ ಮಾಡುವುದಕ್ಕೆ  ಸಂಪೂರ್ಣ ನಿಷೇಧ ಮಾಡಿ  ಮುಜರಾಯಿ ಇಲಾಖೆಯ ಅಧಿಕಾರಿ ಹಾಗೂ ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.

andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

5 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

5 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

5 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

6 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

6 hours ago