ಮೈಸೂರು : ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಾ ಮುತ್ತ ಡ್ರೋನ್ ಅಥವ ಕ್ಯಾಮೆರಾ ಬಳಕೆಗೆ ನಿಷೇಧ ಹೇರಲಾಗಿದೆ.
ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದು, ಪ್ರವಾಸಿಗರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲೆ ಮಾಡಬೇಕು ಇಲ್ಲವಾದಲ್ಲಿ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರು, ಪ್ರವಾಸಿಗರ ಚೆಲ್ಲಾಟಕ್ಕೆ ಬ್ರೇಕ್ ಹಾಕಲು ಈ ನಿಷೇಧ ಹೇರಲಾಗಿದೆ.
ಪ್ರವಾಸಿಗರು ಡ್ರೋನ್, ಮೊಬೈಲ್ ಕ್ಯಾಮರಾಗಳ ಮೂಲಕ ಮನ ಬಂದಂತೆ ಫೋಟೋ ತೆಗೆಯುತ್ತಿದ್ದರು. ಪ್ರತಿನಿತ್ಯ ದೇವಸ್ಥಾನದ ಬಳಿ ಬರುವ ಕಾಡಾನೆಯ ದೃಶ್ಯವನ್ನು ಸೆರೆ ಹಿಡಿದು ಕಾಡು ಪ್ರಾಣಿಗಳನ್ನ ಕೀಟಲೆ ಮಾಡುತ್ತಿದ್ದರು.
ಈ ಸಂಬಂಧ ವಲಯಾಧಿಕಾರಿ ಮಂಜುನಾಥ್ ಅವರು ತಹಶೀಲ್ದಾರ್ ಗೆ ದೂರು ನೀಡಿದ್ದರು. ಅರಣ್ಯಾಧಿಕಾರಿ ಕೋರಿಕೆ ಮೇರೆಗೆ ತಹಶೀಲ್ದಾರ್ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕ್ಯಾಮರಾ ಚಿತ್ರೀಕರಣ ಹಾಗೂ ಡ್ರೋನ್ ಬಳಕೆ ಮಾಡುವುದಕ್ಕೆ ಸಂಪೂರ್ಣ ನಿಷೇಧ ಮಾಡಿ ಮುಜರಾಯಿ ಇಲಾಖೆಯ ಅಧಿಕಾರಿ ಹಾಗೂ ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…