ರಾಜ್ಯ

ಹಿಮವದ್‌ ಗೋಪಾಲಸ್ವಾಮಿ ದೇವಾಲಯದ ಸುತ್ತಾ ಡ್ರೋನ್‌ ಬಳಕೆ ನಿಷೇಧ !

ಮೈಸೂರು : ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಾ ಮುತ್ತ ಡ್ರೋನ್‌ ಅಥವ ಕ್ಯಾಮೆರಾ ಬಳಕೆಗೆ ನಿಷೇಧ ಹೇರಲಾಗಿದೆ.

ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದು, ಪ್ರವಾಸಿಗರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲೆ ಮಾಡಬೇಕು ಇಲ್ಲವಾದಲ್ಲಿ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರು, ಪ್ರವಾಸಿಗರ ಚೆಲ್ಲಾಟಕ್ಕೆ ಬ್ರೇಕ್ ಹಾಕಲು ಈ ನಿಷೇಧ ಹೇರಲಾಗಿದೆ.

ಪ್ರವಾಸಿಗರು ಡ್ರೋನ್, ಮೊಬೈಲ್ ಕ್ಯಾಮರಾಗಳ ಮೂಲಕ ಮನ ಬಂದಂತೆ ಫೋಟೋ ತೆಗೆಯುತ್ತಿದ್ದರು. ಪ್ರತಿನಿತ್ಯ ದೇವಸ್ಥಾನದ ಬಳಿ ಬರುವ ಕಾಡಾನೆಯ ದೃಶ್ಯವನ್ನು ಸೆರೆ ಹಿಡಿದು  ಕಾಡು ಪ್ರಾಣಿಗಳನ್ನ ಕೀಟಲೆ ಮಾಡುತ್ತಿದ್ದರು.

ಈ ಸಂಬಂಧ ವಲಯಾಧಿಕಾರಿ ಮಂಜುನಾಥ್ ಅವರು ತಹಶೀಲ್ದಾರ್ ಗೆ ದೂರು ನೀಡಿದ್ದರು. ಅರಣ್ಯಾಧಿಕಾರಿ ಕೋರಿಕೆ ಮೇರೆಗೆ ತಹಶೀಲ್ದಾರ್ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು,  ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕ್ಯಾಮರಾ ಚಿತ್ರೀಕರಣ ಹಾಗೂ ಡ್ರೋನ್ ಬಳಕೆ ಮಾಡುವುದಕ್ಕೆ  ಸಂಪೂರ್ಣ ನಿಷೇಧ ಮಾಡಿ  ಮುಜರಾಯಿ ಇಲಾಖೆಯ ಅಧಿಕಾರಿ ಹಾಗೂ ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

2 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

19 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

22 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

23 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

24 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

1 day ago