ರಾಜ್ಯ

ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ : ಸಚಿವ.ಎನ್.ಚಲುವರಾಯಸ್ವಾಮಿ

ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್ ಆಧಾರಿತ ಆ್ಯಂಡ್ರಾಯ್ಡ್ ಮೊಬೈಲ್ ತಂತ್ರಾಂಶವನ್ನು ಬಳಸಿ ರೈತರ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ತಿಳಿಸಿದರು.

ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಜಿ.ಹೆಚ್. ರವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಸಭೆಯಲ್ಲಿಂದು ಉತ್ತರಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು, ರಾಜ್ಯದ ಎಲ್ಲಾ ಕಂದಾಯ ಗ್ರಾಮಗಳಲ್ಲಿ ಖಾಸಗಿ ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದ್ದು ಸ್ವತಃ ರೈತರೇ ” ಬೆಳೆ ಸಮೀಕ್ಷೆ ರೈತರ ಆಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು..

2017 ನೇ ಸಾಲಿನಿಂದ ಸರ್ಕಾರಿ ಅಧಿಕಾರಿಗಳ ( ಕಂದಾಯ, ಕೃಷಿ , ತೋಟಗಾರಿಕೆ, ಹಾಗೂ ರೇಷ್ಮೆ) ಮೂಲಕ ಬೆಳೆ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, 2018-19 ನೇ ಸಾಲಿನಿಂದ ಆಯಾ ಗ್ರಾಮಗಳಲ್ಲಿ ಲಭ್ಯವಿರುವ ಮಾಹಿತಿ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇರುವ ಯುವಕರನ್ನು (ಖಾಸಗಿ ನಿವಾಸಿಗಳು) ಬಳಸಿಕೊಂಡು ಖಾಸಗಿ ನಿವಾಸಿಗಳ ಆಪ್ ಮೂಲಕ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮದ ಉದ್ದೇಶ ಜಿಪಿಎಸ್ ಆಧಾರಿತ ಮೊಬೈಲ್ ಅಪ್ಲಿಕೇಶನ್ ಬಳಸಿ ರೈತರ ಜಮೀನಿನ ಸರ್ವೆ ನಂಬರ್, ಉಪ ಸರ್ವೆ ನಂಬರ್ ವಾರು ಬೆಳೆ ಪ್ರದೇಶದ ನಿಖರ ಮಾಹಿತಿ ದಾಖಲಿಸಬಹುದು ಎಂದು ಸಚಿವರು ತಿಳಿಸಿದರು..

ಇದನ್ನೂ ಓದಿ :-ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ

ಇನ್ನೂ 2020- 21 ನೇ ಸಾಲಿನಿಂದ ರೈತರೇ ಸ್ವತಃ ತಮ್ಮ ಜಮೀನಿನಲ್ಲಿ ಬೆಳದ ಬೆಳೆಯನ್ನು ರೈತರ ಆಪ್ ಮೂಲಕ ನಮೂದಿಸಲು ಅವಕಾಶ ಕಲ್ಪಿಸಿದ್ದು, 2024- 25 ನೇ ಸಾಲಿನಲ್ಲಿ ರೈತರ ಬೆಳೆಯ ನೈಜ ಛಾಯಾಚಿತ್ರ ದಾಖಲಾತಿಯನ್ನು ಖಚಿತಪಡಿಸಿಕೊಳ್ಳಲು ಮೊಬೈಲ್ ಆಪ್ ನಲ್ಲಿ ” Tilt angle ಮತ್ತು “AI tool” ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ.

ಪ್ರಸ್ತುತ ರೈತರ ಮೊಬೈಲ್ ಆಪ್ ಹಾಗೂ ಖಾಸಗಿ ನಿವಾಸಿಗಳ ಆಪ್ ಮುಖಾಂತರ ಪೂರ್ವ ಮುಂಗಾರು, ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು..

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

12 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

12 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

13 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

13 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

14 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

15 hours ago